ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಎಸ್.ಡಿ.ಎಂ. ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರ ಸಂಘ ಗುಡ್ಡೆಯಂಗಡಿ : ರುಡಾಲ್ಫ್ ಮಚಾದೊ ಅಧ್ಯಕ್ಷರಾಗಿ ಆಯ್ಕೆ

Posted On: 10-03-2023 05:21PM

ಉದ್ಯಾವರ : ಎಸ್.ಡಿ.ಎಂ. ಆಟೋರಿಕ್ಷಾ ಚಾಲಕರು ಮತ್ತು ಮಾಲಕರ ಸಂಘ ಗುಡ್ಡೆಯಂಗಡಿ ಉದ್ಯಾವರ ಇದರ 2023 - 24ನೇ ಸಾಲಿನ ಅಧ್ಯಕ್ಷರಾಗಿ ರುಡಾಲ್ಫ್ ಮಚಾದೊ ಸಂಪಿಗೆನಗರ ಆಯ್ಕೆಯಾಗಿದ್ದಾರೆ.

ನೂತನ ಸಾಲಿನ ಕಾರ್ಯಕಾರಿ ಸಮಿತಿಯು ಅಸ್ತಿತ್ವಕ್ಕೆ ಬಂದಿದ್ದು, ಉಪಾಧ್ಯಕ್ಷರಾಗಿ ಸಿರಾಜುದ್ದೀನ್ ಗುಡ್ಡೆಯಂಗಡಿ, ಕಾರ್ಯದರ್ಶಿಯಾಗಿ ಅಪ್ಪು ಸಂಪಿಗೆನಗರ, ಜೊತೆ ಕಾರ್ಯದರ್ಶಿಯಾಗಿ ಚಂದ್ರ ಕಂಪನಬೆಟ್ಟು, ಕೋಶಾಧಿಕಾರಿಯಾಗಿ ಭರತ್ ಸನಿಲ್ ಸಂಪಿಗೆನಗರ, ಗೌರವ ಸಲಹೆಗಾರರಾಗಿ ಸುಧಾಕರ್ ಸನಿಲ್ ಸಂಪಿಗೆನಗರ, ಸಲಹಾ ಸಮಿತಿಯ ಸದಸ್ಯರಾಗಿ ರಾಮ ಪೂಜಾರಿ, ಪ್ರಕಾಶ್ ಪೂಜಾರಿ, ಆರಿಫ್, ರವಿರಾಜ್, ವಿನಯ ಎಸ್ಎನ್ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಗೌರವಾಧ್ಯಕ್ಷರಾಗಿ ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯ ಜಿತೇಂದ್ರ ಶೆಟ್ಟಿ ಸೇವೆ ಸಲ್ಲಿಸುತ್ತಿದ್ದಾರೆ.