ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ನಾಳೆ : ಪಡುಬಿದ್ರಿ ಖಡ್ಗೇಶ್ವರಿ ಬ್ರಹ್ಮಸ್ಥಾನದಲ್ಲಿ ಕಡೇ ಢಕ್ಕೆಬಲಿ ಮತ್ತು ಮಂಡಲ ವಿಸರ್ಜನೆ ಸೇವೆ

Posted On: 10-03-2023 09:35PM

ಪಡುಬಿದ್ರಿ : ಇಲ್ಲಿನ ಖಡ್ಗೇಶ್ವರಿ ಬ್ರಹ್ಮಸ್ಥಾನದಲ್ಲಿ ದ್ವೈವಾರ್ಷಿಕವಾಗಿ ಜರಗುವ ಢಕ್ಕೆ ಬಲಿ ಸೇವೆ ಮತ್ತು ಮಂಡಲ ವಿಸರ್ಜನೆಯು ನಾಳೆ (ಮಾಚ್೯ 11, ಶನಿವಾರ) ಸಂಪನ್ನಗೊಳ್ಳಲಿದೆ.

ಈ ಪ್ರಯುಕ್ತ ಮಧ್ಯಾಹ್ನ ಗಂಟೆ 12ಕ್ಕೆ ಸರಿಯಾಗಿ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಸಾರ್ವಜನಿಕ ಅನ್ನಸಂತರ್ಪಣೆ ಮತ್ತು ಸಂಜೆ ಗಂಟೆ 4:30ಕ್ಕೆ ಫಲಪುಷ್ಪ ತಾಂಬೂಲ ಪರಿಕರ ಹೊರೆ ಕಾಣಿಕೆ ಮೆರವಣಿಗೆ, ರಾತ್ರಿ ಸನ್ನಿಧಾನದಲ್ಲಿ ತಂಬಿಲ‌ ಸೇವೆ ನಂತರ ಢಕ್ಕೆಬಲಿ ಸೇವೆ ಬಳಿಕ ಮಂಡಲ ವಿಸರ್ಜನೆ ಸೇವೆಯು ಜರಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.