ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ನಿಧನ : ಕಾಪು ಬ್ಲಾಕ್ ಕಾಂಗ್ರೆಸ್ ಸಂತಾಪ

Posted On: 11-03-2023 02:31PM

ಕಾಪು : ಮಾಜಿ ಶಾಸಕರು ಹಾಗೂ ಮಾಜಿ ಸಂಸದರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರು ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿಗಳಾಗಿದ್ದ ಹಿರಿಯ ಕಾಂಗ್ರೆಸ್ ಮುಖಂಡ ಆರ್. ಧ್ರುವ ನಾರಾಯಣ್ ರವರ ಆಕಸ್ಮಿಕ ನಿಧನಕ್ಕೆ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯು ತೀವ್ರ ಸಂತಾಪ ಸೂಚಿಸಿದೆ.

ಈ ಬಗ್ಗೆ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಪತ್ರಿಕಾ ಹೇಳಿಕೆ ನೀಡಿ, ವಿದ್ಯಾರ್ಥಿ ಕಾಂಗ್ರೆಸ್ ನಿಂದ ಇವತ್ತಿನವರೆಗೂ ತನ್ನ ಒಡನಾಡಿಯಾಗಿ ಕೆಲಸ ಕಾರ್ಯ ಮಾಡಿದ್ದ ಒಬ್ಬ ಕ್ರಿಯಾಶೀಲ, ಪ್ರಾಮಾಣಿಕ, ನಿಷ್ಠಾವಂತ ರಾಜಕೀಯ ನಾಯಕನನ್ನು ನಾವು ಕಳೆದು ಕೊಂಡಿದ್ದು, ಅವರ ಅಗಲುವಿಕೆಯು ವೈಯುಕ್ತಿಕವಾಗಿ ನನಗೆ ಅಪಾರ ದುಃಖವನ್ನು ತರಿಸಿದೆ. ಜೊತೆಗೆ ಒಬ್ಬ ಕ್ರಿಯಾಶೀಲ, ಅನುಭವಿ ರಾಜಕಾರಣಿಯನ್ನು ಕಳೆದುಕೊಂಡಿರುವುದು ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವನ್ನುಂಟುಮಾಡಿದೆ. ಅವರ ಕುಟುಂಬ ವರ್ಗಕ್ಕೆ ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಸಹನೆ, ಶಕ್ತಿಯನ್ನು ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ನವೀನ್ ಚಂದ್ರ ಸುವರ್ಣ, ದೇವಿಪ್ರಸಾದ್ ಶೆಟ್ಟಿ ಬೆಳಪು, ನವೀನ್ ಚಂದ್ರ ಜೆ. ಶೆಟ್ಟಿ, ಶಿವಾಜಿ ಸುವರ್ಣ ಬೆಳ್ಳೆ, ಅಮೀರ್ ಮೊಹಮ್ಮದ್ ಕಾಪು, ಶಾಂತಲತಾ ಎಸ್. ಶೆಟ್ಟಿ, ಶರ್ಫುದ್ದೀನ್ ಶೇಖ್, ವಿಕ್ರಮ್ ಕಾಪು, ವಿನಯ್ ಬಲ್ಲಾಳ್, ಮೋಹಮ್ಮದ್ ಸಾದಿಕ್ ಹಾಗೂ ಬ್ಲಾಕ್ ಪದಾಧಿಕಾರಿಗಳು, ಪುರಸಭಾ ಸದಸ್ಯರು, ವಿವಿಧ ಘಟಕ/ಸಮಿತಿಗಳ ಅಧ್ಯಕ್ಷರು ಮತ್ತು ಪಕ್ಷದ ಪ್ರಮುಖರು ಸಂತಾಪ ವ್ಯಕ್ತಪಡಿಸಿದ್ದಾರೆ.