ಪೆರ್ಡೂರು : ಇಲ್ಲಿಯ ಬೈರಂಪಳ್ಳಿಯ ಶ್ರಮಿಕ ತರುಣರ ಯುವಕರ ತಂಡ ಸದಾ ಅಶಕ್ತರ ಪಾಲಿಗೆ ಸದಾ ಒಂದಲ್ಲ ಒಂದು ರೀತಿಯಲ್ಲಿ ನೆರವಾಗುತ್ತ, ಬಡವರ ಕಣ್ಣೀರು ಒರೆಸುವ ಕಾಯಕದಲ್ಲಿ ನಿರತವಾಗಿದೆ.
ನಾಳೆ ಹಾಲಕ್ಕಿಯಲ್ಲಿ ಊರಿನ ಗ್ರಾಮಸ್ಥರ ಶ್ರೇಯೋಭಿವೃದ್ಧಿ ಹಾಗೂ ಸರ್ವರ ಸುಬಿಕ್ಷೆಗಾಗಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,ಭಜನಾ ಕಾರ್ಯಕ್ರಮ, ಸಭಾ ಕಾರ್ಯಕ್ರಮ, ಸಾರ್ವಜನಿಕ ಅನ್ನ ಸಂತರ್ಪಣೆ, ರಾತ್ರಿ 9 ಗಂಟೆಯಿಂದ ಶ್ರೀ ವೀರಭದ್ರ ಸ್ವಾಮಿ ದಶಾವತಾರ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಹಿರಿಯಡ್ಕ ವತಿಯಿಂದ ಶ್ರೀ ಶನೀಶ್ವರ ಮಹಾತ್ಮೆ ತುಳು ಯಕ್ಷಗಾನ ಬಯಲಾಟ ನಡೆಯಲಿದ್ದು,ಎಲ್ಲರೂ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿ ಎಂದು ಶ್ರಮಿಕ ತರುಣರ ತಂಡ ಇದರ ಸಂಸ್ಥಾಪಕರಾದ ಸಂತೋಷ್ ಕುಮಾರ್ ಬೈರಂಪಳ್ಳಿ ಪ್ರಕಟಣೆಯಲ್ಲಿ ತಿಳಿಸಿರುವರು.