ಮಂಗಳೂರು : ಕುಲಾಲ ಸಮುದಾಯಕ್ಕೆ ಮುಕುಟಪ್ರಾಯವಾಗಿ ಕಂಗೊಳಿಸಲಿರುವ ಸಮುದಾಯದ ಸ್ವಾಭಿಮಾನ ಮತ್ತು ಹೆಮ್ಮೆಯ ಪ್ರತೀಕವಾದ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವದ ಶುಭವಸರದಲ್ಲಿದೆ.
ಶ್ರೀ ಕ್ಷೇತ್ರದ ಬ್ರಹ್ಮಕಲಶೋತ್ಸವವು ಮೇ14 ರಿಂದ ಮೇ 24ರವರೆಗೆ ವೈಭವದಿಂದ ನೆರವೇರಲಿದೆ. ಈ 10 ದಿನಗಳ ಉತ್ಸವ ಕುಲಾಲ ಸಮುದಾಯದ ಉತ್ಸವವಾಗುವ ದಿಸೆಯಲ್ಲಿ ಯೋಚನೆ, ಯೋಜನೆ, ಅನುಷ್ಠಾನಗಳ ಆಯೋಜನೆಗಾಗಿ ಮಾಚ್೯ 12,ಆದಿತ್ಯವಾರ ಶ್ರೀ ಕ್ಷೇತ್ರದಲ್ಲಿ ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ. ಶ್ರೀ ಕ್ಷೇತ್ರದ ಜೀರ್ಣೋದ್ಧಾರದ ಪ್ರತೀ ಕಾರ್ಯದಲ್ಲಿಯೂ ಸಕ್ರಿಯವಾಗಿದ್ದ ಪ್ರತಿಯೊಬ್ಬರೂ ಈ ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸಹಕಾರಗಳನ್ನಿತ್ತು ಈ ಸಭೆಯನ್ನು ಯಶಸ್ವಿಗೊಳಿಸಲು ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷರಾದ ಮಯೂರ್ ಉಳ್ಳಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.