ಶಿರ್ವ : ಇಲ್ಲಿನ ಮಾಣಿಬೆಟ್ಟುವಿನಲ್ಲಿ ಕಾಪುವಿಗಾಗಿ ಕಾಂಗ್ರೆಸ್ ಎಂದು ಕಾಂಗ್ರೆಸ್ ಪಕ್ಷದಿಂದ ಮುಂಬರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಹಾಕಲಾಗಿದ್ದ ಬ್ಯಾನರ್ ಅನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿದ್ದಾರೆ.
ಬ್ಯಾನರ್ ಹರಿಯುವ ಮೂಲಕ ದುಷ್ಕೃತ್ಯವೆಸಗಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಕಾಂಗ್ರೆಸ್ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಆಗ್ರಹಿಸಿದ್ದಾರೆ.