ಪಡುಬಿದ್ರಿ : ಟೈಮಿಂಗ್ ವಿಚಾರ - ಬಸ್ ನಿರ್ವಾಹಕ, ಟೈಂ ಕೀಪರ್ ಹೊಡೆದಾಟ ; ದೂರು -ಪ್ರತಿದೂರು ದಾಖಲು
Posted On:
13-03-2023 06:05PM
ಪಡುಬಿದ್ರಿ : ಬಸ್ ನ ಟೈಮಿಂಗ್ ವಿಚಾರವಾಗಿ ಬಸ್ ನಿರ್ವಾಹಕ ಮತ್ತು ಬಸ್ ಟೈಮ್ ಕೀಪರ್ ನಡುವಿನ ಹೊಡೆದಾಟದ ಘಟನೆ ರವಿವಾರ ಪಡುಬಿದ್ರಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಮಂಗಳೂರು - ಕುಂದಾಪುರ ಮಾರ್ಗದ ವೇಗದೂತ ಬಸ್ ನಿರ್ವಾಹಕ ಕಾಪು ಮಲ್ಲಾರುವಿನ ಶಮೀಯುಲ್ಲಾ ನೀಡಿದ ದೂರಿನಲ್ಲಿ ಬಸ್ಸು ಹೊರಡುವ ಸಮಯ ಪಡುಬಿದ್ರಿ ಟೈಂ ಕೀಪರ್ ಮಹೇಶ್ ಎಂಬಾತನು ಬಸ್ಸಿನ ಮುಂದೆ ಬಂದು, ಮುಂದೆ ಹೋಗದಂತೆ ತಡೆದಿದ್ದು, ಆತನನ್ನು ಕೇಳುತ್ತಿದ್ದಾಗ, ಮಹೇಶನು ಹಲ್ಲೆಮಾಡಿ ಅವ್ಯಾಚ್ಯವಾಗಿ ಬೈದು ಬಸ್ಸಿನ ಚಾಲಕನಿಗೂ ಮುಂದಕ್ಕೆ ನಿಮ್ಮನ್ನು ನೋಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿರುತ್ತಾನೆ ಎಂದು ದೂರಿನಲ್ಲಿ ದಾಖಲಿಸಿದ್ದಾರೆ.
ಇತ್ತ ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದ ನಿವಾಸಿ ಪಡುಬಿದ್ರಿ ಬಸ್ ನಿಲ್ದಾಣದಲ್ಲಿ ಟೈಂ ಕೀಪರ್ ಆಗಿರುವ ಮಹೇಶ್ ಮಂಗಳೂರು - ಕುಂದಾಪುರದ ಎಕ್ಸ್ಪ್ರೆಸ್ ಬಸ್ಸು ಪಡುಬಿದ್ರಿಯ ಬಸ್ಸು ನಿಲ್ದಾಣಕ್ಕೆ ಬಂದಿತ್ತು. ಹೊರಡುವ ಸಮಯವಾದ್ದರಿಂದ ಹೊರಡುವಂತೆ ಚಾಲಕನಿಗೆ ಸೂಚಿಸಿದರೂ ಕೂಡಾ ಹೊರಡದೇ ಇದ್ದುದರಿಂದ, ಬಸ್ಸಿನ ಎದುರು ಬಂದು, ಹಿಂದಿನಿಂದ ಬರುವ ಬಸ್ಸಿಗೆ ಕೆಲಸ ಮಾಡುತ್ತಿರುವಾಗ, ಸದ್ರಿ ಬಸ್ಸಿನ ಕಂಡಕ್ಟರ್ ಶಮೀಯುಲ್ಲಾ ಎಂಬುವರು ಹಲ್ಲೆ ಮಾಡಿ ನಿನ್ನನ್ನು ನೋಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿರುತ್ತಾರೆ ಎಂದು ದೂರು ನೀಡಿರುತ್ತಾರೆ.
ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ದೂರು - ಪ್ರತಿದೂರು ದಾಖಲಾಗಿದೆ.