ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಪಡುಬಿದ್ರಿ ಜಾತ್ರೆ ; ಕಾಪು ಮಾರಿಪೂಜೆಯಲ್ಲಿ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅನುಮತಿ ನೀಡದಂತೆ ಹಿಂದು ಪರ ಸಂಘಟನೆಗಳಿಂದ ಮನವಿ

Posted On: 19-03-2023 09:25AM

ಪಡುಬಿದ್ರಿ : ಇಲ್ಲಿನ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ಮಾಚ್೯ 21 ಮತ್ತು 22 ರಂದು ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅನುಮತಿ ನೀಡದಂತೆ ಪಡುಬಿದ್ರಿ ವಿಶ್ವಹಿಂದು ಪರಿಷತ್ ಬಜರಂಗದಳದ ಕಾರ್ಯಕರ್ತರು ದೇವಳದ ಕಾರ್ಯನಿರ್ವಹಣಾಧಿಕಾರಿ ಮತ್ತು ಅನುವಂಶಿಕ ಮೊಕ್ತೇಸರರಿಗೆ ಮನವಿ ನೀಡಿರುತ್ತಾರೆ.

ಕಾಪುವಿನಲ್ಲಿಯೂ ಮಾಚ್೯ 21 ಮತ್ತು 22 ರಂದು ಜರಗುವ ಮಾರಿಪೂಜೆಯಲ್ಲಿಯೂ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದೆಂದು ಕಾಪುವಿನ ಹಿಂದು ಪರ ಸಂಘಟನೆಯ ಕಾರ್ಯಕರ್ತರು ಹೊಸ ಮಾರಿಗುಡಿಯ ವ್ಯವ್ಥಾಪನಾ ಸಮಿತಿಯ ಅಧ್ಯಕ್ಷರಿಗೆ ಮನವಿ ಮಾಡಿದ್ದಾರೆ.