ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಶಿರ್ವ : ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರ ಕಸಿದು ಅಪರಿಚಿತ ಯುವಕರು ಪರಾರಿ

Posted On: 26-03-2023 10:32AM

ಶಿರ್ವ : ವಿಳಾಸ ಕೇಳುವ ನೆಪದಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ಯುವಕರು ಚರ್ಚಿನಲ್ಲಿ ಪೂಜೆ ಸಲ್ಲಿಸಿ ಮನೆಗೆ ತೆರಳುತ್ತಿರುವ ಮಹಿಳೆಯ ಸರ ಕಸಿದು ಪರಾರಿಯಾದ ಘಟನೆ ತುಂಡುಬಲ್ಲೆ ಲೆತ್ತಿ ಬಾಯಿ ಮನೆ ಬಳಿ ಸಂಭವಿಸಿದೆ.

ಶಿರ್ವ ಸೊರ್ಪು ನಿವಾಸಿ ಎಮಿಲಿಯನ್ ಸಲ್ದಾನ ಅವರು ಶಿರ್ವ ಚರ್ಚ್ ನಲ್ಲಿ ಪೂಜೆ ಮುಗಿಸಿ ತುಂಡು ಬಲ್ಲೆ ಬಳಿ ಬಸ್ಸಿನಿಂದಿಳಿದು ಮನೆ ಕಡೆ ಒಬ್ಬರೇ ತೆರಳುತ್ತಿದ್ದರು. ಆ ವೇಳೆ ಹೆಲ್ಮಟ್ ಧರಿಸಿ ಕಪ್ಪು ಬೈಕ್ ನಲ್ಲಿ ಬಂದ ಯುವಕರಿಬ್ಬರಲ್ಲಿ ಓರ್ವ ಮಹಿಳೆಯ ಬಳಿ ಬಂದು ಚೀಟಿ ತೋರಿಸಿ ತುಳುವಿನಲ್ಲಿ ಉಂದು ಏರೆನ ಇಲ್ಡ್ ಗೊತ್ತುಂಡೇ ಎಂದು ಕೇಳಿದ್ದಾನೆ. ಮಹಿಳೆ ಇಲ್ಲವೆಂದು ಹೇಳಿ ಮುಂದೆ ಹೋದಾಗ ಹಿಂದಿನಿಂದ ಬಂದು ಆಕೆಯ ಕುತ್ತಿಗೆಯಲ್ಲಿದ್ದ ಸುಮಾರು ರೂ. 60,000 ಮೌಲ್ಯದ 12 ಗ್ರಾಮ್ ತೂಕದ ಕ್ರಾಸ್ ಪೇಂಡೆಂಟ್ ಇರುವ ಚಿನ್ನದ ಸರವನ್ನು ಕಸಿದಿದ್ದಾನೆ. ಆಗ ಮಹಿಳೆ ಜೋರಾಗಿ ಬೊಬ್ಬೆ ಹೊಡೆದಿದ್ದು ಸವಾರರಿಬ್ಬರೂ ತುಂಡುಬಲ್ಲೆ ಮುಖ್ಯರಸ್ತೆಯ ಕಡೆಗೆ ಪರಾರಿಯಾಗಿದ್ದಾರೆ.

ಮಹಿಳೆ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.