ಕಾಪು : ಕುಂಜೂರಿನಲ್ಲಿ ಭಜನಾ ಮಂಗಲೋತ್ಸವ ಸಂಪನ್ನ
Posted On:
31-03-2023 07:33PM
ಕಾಪು : ತಾಲೂಕಿನ ಕುಂಜೂರಿನ ಶ್ರೀ ದುರ್ಗಾ ಮಿತ್ರ ವೃಂದದ 15 ನೇ ವಾರ್ಷಿಕ ಭಜನಾ ಮಂಗಲೋತ್ಸವವು ಕುಂಜೂರು ಶ್ರೀ ದುರ್ಗಾ ದೇವಸ್ಥಾನದ ಪುನಃ ಪ್ರತಿಷ್ಠ ವರ್ಧಂತಿಯ ಸಂದರ್ಭದಲ್ಲಿ ನೆರವೇರಿತು.
ಭಜನಾಮಂಗಲೋತ್ಸವವನ್ನು ಎರ್ಮಾಳು ನೈಮಾಡಿ ನಾರಾಯಣ ಕೆ.ಶೆಟ್ಟಿ ಅವರು
ಉದ್ಘಾಟಿಸಿದರು. ದೇವಳದ ಅರ್ಚಕ ವೇ.ಮೂ.
ಹರಿಕೃಷ್ಣ ಉಡುಪ, ಪವಿತ್ರಪಾಣಿ
ಕೆ.ಎಲ್.ಕುಂಡಂತಾಯ, ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಸತೀಶ ಕುಂಡಂತಾಯ,ದುರ್ಗಾ ಮಿತ್ರವೃಂದದ ಅಧ್ಯಕ್ಷ ಚಂದ್ತಹಾಸ ಆಚಾರ್ಯ,
ದುರ್ಗಾ ಮಿತ್ರವೃಂದದ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಜ್ಯೋತಿ ಟೀಚರ್,ದುರ್ಗಾ ಸೇವಾ ಸಮಿತಿಯ ಕಾರ್ಯದರ್ಶಿ ಸುದರ್ಶನ
ವೈ.ಎಸ್.,ದುರ್ಗಾ ಮಿತ್ರ ವೃಂದದ ಸತೀಶ ಶೆಟ್ಟಿ ಗುಡ್ಡೆಚ್ಚಿ, ರಾಕೇಶ್ ಕುಂಜೂರು, ಸುನಿಲ್ ಎಸ್.ಮುಂತಾದವರು ಉಪಸ್ಥಿತರಿದ್ದರು.
ಬೆಳಗ್ಗೆ ಎಂಟೂವರೆ ಗಂಟೆಯಿಂದ ರಾತ್ರಿ ಎಂಟೂವರೆ ಗಂಟೆ ಪರ್ಯಂತ ಹದಿನೈದು ಭಜನಾ ಮಂಡಳಿಗಳು ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವು. ದುರ್ಗಾ ಮಿತ್ರವೃಂದದ ಮಹಿಳಾ ಘಟಕದ ಸದಸ್ಯೆಯರಿಂದ ಕುಣಿತ ಭಜನೆ ನಡೆದು ಮಂಗಲೋತ್ಸವವು ಸಮಾಪನಗೊಂಡಿತು.
ದುರ್ಗಾ ಮಿತ್ರವೃಂದದ ಬಾಲಕರು ಭಜನೆ ಹಾಗೂ ಕುಣಿತ ಭಜನೆಯಲ್ಲಿ ಭಾಗವಹಿಸಿದ್ದರು.
ದುರ್ಗಾ ಮಾತೆಯ ಸನ್ನಿಧಿಯಲ್ಲಿ ಪುನಃ ಪ್ರತಿಷ್ಠಾ ವರ್ಧಂತಿಯ ಅಂಗವಾಗಿ ಬೆಳಗ್ಗೆ ಧಾರ್ಮಿಕ ವಿಧಿಗಳು , ಮಧ್ಯಾಹ್ನ ಅನ್ನಸಂತರ್ಪಣೆ ,ರಾತ್ರಿ ರಂಗಪೂಜೆ ಹಾಗೂ ಬಲಿಉತ್ಸವ ನೆರವೇರಿತು.