ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಮಹಮ್ಮದನ್ ಯುವಕರ ತಂಡದಿಂದ ನಡ್ಸಾಲುವಿನಲ್ಲಿ ತಾತ್ಕಾಲಿಕ ರಸ್ತೆ ದುರಸ್ತಿ

Posted On: 05-07-2020 04:03PM

ನಡ್ಸಾಲು.05, ಜುಲೈ : ದೀನ್ ಸ್ಟ್ರೀಟ್ ಪ್ರವೇಶಿಸುವ ರಸ್ತೆ ಮಳೆ ನೀರು ಹರಿದು ಹೋಗಲು ವ್ಯವಸ್ಥೆ ಇಲ್ಲದ ಕಾರಣ ರಸ್ತೆ ತುಂಬಾ ನೀರು ನಿಂತು ಜನರು ನಡೆದುಕೊಂಡು ಹೋಗಲು ಮತ್ತು ವಾಹನದಲ್ಲಿ ಹೋಗಲು ತುಂಬಾ ಕಷ್ಟಕರವಾಗುತ್ತಿತ್ತು. ಎಷ್ಟು ಬಾರಿ ಪಂಚಾಯಿತಿಗೆ ತಿಳಿಸಿದರು ಕೂಡ ಪ್ರಯೋಜನವಾಗಲಿಲ್ಲ ಇದನ್ನು ಸ್ಥಳೀಯ ಮಹಮ್ಮದನ್ ಯುವಕರು ತಂಡ ಸೇರಿ ತಾತ್ಕಾಲಿಕವಾಗಿ ನೀರು ಹರಿದು ಹೋಗಲು ವ್ಯವಸ್ಥೆ ಮಾಡಿ ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿ ಮತ್ತು ಜನಪ್ರತಿನಿಧಿಗಳು ಇದನ್ನು ಆದಷ್ಟು ಬೇಗ ಸರಿಪಡಿಸಿ ಕೊಡಬೇಕಾಗಿ ತಮ್ಮಲ್ಲಿ MOHAMMADAN HELPING HAND ವಿನಂತಿಸಿಕೊಳ್ಳುತ್ತಿದ್ದಾರೆ