ಉಡುಪಿ : ಶ್ರೀ ನಾರಾಯಣ ಗುರು ವಿಚಾರವೇದಿಕೆ ಕರ್ನಾಟಕ ಇದರ ರಾಜ್ಯ ಅಧ್ಯಕ್ಷರಾದ ಸತ್ಯಜಿತ್ ಸುರತ್ಕಲ್ ಅವರಿಗೆ ಕಳೆದ 16 ವರ್ಷ ಗಳಿಂದ ನೀಡಲಾಗಿದ್ದ ಪೊಲೀಸ್ ಭದ್ರತಾ ಸಿಬ್ಬಂದಿಯನ್ನು ಹಿಂದಕ್ಕೆ ಪಡೆದಿರುವ ವಿಚಾರವಾಗಿ ಅವರಿಗೆ ಹಿಂಪಡೆದ ಪೊಲೀಸ್ ಭದ್ರತಾ ಸಿಬ್ಬಂದಿಯನ್ನು ಮತ್ತೆ ನಿಯೋಜಿಸಬೇಕಾಗಿ ಶ್ರೀ ನಾರಾಯಣಗುರು ವಿಚಾರ ವೇದಿಕೆ ಉಡುಪಿ ಜಿಲ್ಲಾ ವತಿಯಿಂದ ಮಾನ್ಯ ಜಿಲ್ಲಾಧಿಕಾರಿ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಅಧ್ಯಕ್ಷರಾದ ಜಗನ್ನಾಥ ಕೋಟೆ, ಉಡುಪಿ ಜಿಲ್ಲಾ ಗೌರವಾಧ್ಯಕ್ಷರಾದ ರಾಜು ಪೂಜಾರಿ ಉಪ್ಪೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರದೀಪ್ ಪಳ್ಳಿ, ಉಡುಪಿ ತಾಲೂಕು ಅಧ್ಯಕ್ಷರಾದ ಶಶಿಧರ್ ಅಮೀನ್,, ಕಾರ್ಕಳ ತಾಲೂಕು ಅಧ್ಯಕ್ಷರಾದ ಗಂಗಾಧರ ಪಣಿಯೂರು, ಬ್ರಹ್ಮಾವರ ತಾಲೂಕು ಅಧ್ಯಕ್ಷರಾದ ಕರುಣಾಕರ ಪೂಜಾರಿ ಹಂದಾಡಿ, ಬನ್ನಂಜೆ ಬಿಲ್ಲವರ ಸಂಘದ ಅಧ್ಯಕ್ಷರಾದ ಮಾಧವ ಬನ್ನಂಜೆ, ಜಿಲ್ಲಾ ಉಪಾಧ್ಯಕ್ಷರಾದ ಕಾಮರಾಜ್ ಜಿ, ಜಿಲ್ಲಾ ಕೋಶಾಧಿಕಾರಿ ಆದ ವೀರೇಶ್ ಸುವರ್ಣ, ವಿನಯ್ ಪಡುಕೆರೆ, ಸತೀಶ್ ಬಂಗೇರ, ಜಿಲ್ಲಾ ಜೊತೆ ಕಾರ್ಯದರ್ಶಿಯಾದ ರಿತೇಶ್ ಕೋಟ್ಯಾನ್, ಲೋಕೇಶ್ ಪೂಜಾರಿ ಹೆರ್ಗ, ಸಂತೋಷ ಪೂಜಾರಿ ಹೆರ್ಗ, ಅರವಿಂದ ಕೋಟ್ಯಾನ್, ಕುಶಾಲ್ ಜತ್ತನ್, ಅಶೋಕ್ ಅಮೀನ್, ಸತೀಶ್ ಬಂಗೇರ ಹೇರೂರು, ರಾಜ್ಯ ಸಹ ಸಂಘಟನಾ ಕಾರ್ಯದರ್ಶಿಗಳಾದ ರಾಕೇಶ್ ಪೂಜಾರಿ ಕಲ್ಯಾಣಪುರ ಉಪಸ್ಥಿತರಿದ್ದರು.