ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಸಸಿಹಿತ್ಲು ಭಗವತಿ ಯಕ್ಷಗಾನ ಮೇಳದ ಕಲಾವಿದ ನಲ್ಕ ಜಗದೀಶ ನಿಧನ

Posted On: 07-04-2023 03:36PM

ಮುಲ್ಕಿ : ಸಸಿಹಿತ್ಲು ಭಗವತಿ ಯಕ್ಷಗಾನ ಮೇಳದ ಹಿರಿಯ ಕಲಾವಿದ ನಲ್ಕ ಜಗದೀಶ ( 56 ) ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಸುಮಾರು 21 ವರ್ಷಗಳಿಂದ ಸಸಿಹಿತ್ಲು ಮೇಳದಲ್ಲಿ ಕಲಾವಿದನಾಗಿ ದುಡಿದಿರುವ ಇವರು ಭಗವತಿ ಮೇಳದ ಪ್ರಸಿದ್ಧ ಪ್ರಸಂಗ ಭಗವತಿ ಕ್ಷೇತ್ರ ಮಹಾತ್ಮೆಯಲ್ಲಿ ಈಶ್ವರನ ಪಾತ್ರ, ದೇವಿ ಮಹಾತ್ಮೆಯಲ್ಲಿ ವಿಷ್ಣು, ರಕ್ತಬೀಜ ಪಾತ್ರ ನಿರ್ವಹಿಸಿದ್ದರು.

ಕಾಸರಗೋಡು ತಾಲೂಕಿನ ನಲ್ಕದಲ್ಲಿ ಜನಿಸಿದ ಇವರು ಸಣ್ಣ ಪ್ರಾಯದಲ್ಲಿಯೇ ಯಕ್ಷಗಾನದ ಕಡೆಗೆ ಆಕರ್ಷಿತರಾಗಿದ್ದರು. ಪತ್ನಿ ಹವ್ಯಾಸಿ ಯಕ್ಷಗಾನ ಕಲಾವಿದೆ ಹೇಮಾ, ಒಂದು ಹೆಣ್ಣು ಮತ್ತು ಗಂಡು ಮಗುವನ್ನು ಅಗಲಿದ್ದಾರೆ.

ನಲ್ಕ ಜಗದೀಶರವರ ಅಕಾಲಿಕ ನಿಧನಕ್ಕೆ ಶ್ರೀ ಭಗವತೀ ದೇವಸ್ಥಾನದ ಆಡಳಿತ ಮಂಡಳಿ, ಪ್ರಧಾನ ಅರ್ಚಕರು, ಪ್ರಮುಖರು, ಮೇಳದ ಸಂಚಾಲಕರು, ಸಹಕಲಾವಿದರು, ಯಕ್ಷಾಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.