ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಪಡುಬಿದ್ರಿ : ಗಾಂಜಾ ಸೇವನೆ - ಓರ್ವ ಪೋಲಿಸ್ ವಶಕ್ಕೆ

Posted On: 14-04-2023 10:03AM

ಪಡುಬಿದ್ರಿ: ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪಡುಬಿದ್ರಿ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.

ಇಲ್ಲಿನ ಠಾಣಾಧಿಕಾರಿ ಗಸ್ತಿನಲ್ಲಿದ್ದ ಸಮಯ ನಡ್ಸಾಲು ಗ್ರಾಮದ ಕಂಚಿನಡ್ಕದಲ್ಲಿ ದಾವೂದ್ ಹಕೀಂ (24) ಎಂಬಾತನು ಯಾವುದೋ ಅಮಲಿನಲ್ಲಿದ್ದವನಂತೆ ತೂರಾಡುತ್ತಿದ್ದು, ಅವನು ಯಾವುದೋ ಮಾದಕ ಪದಾರ್ಥ ಸೇವಿಸಿರಬಹುದು ಎಂಬ ಬಗ್ಗೆ ಅನುಮಾನಗೊಂಡು ವಶಕ್ಕೆ ಪಡೆದುಕೊಂಡು ಮಣಿಪಾಲ ಫೊರೆನ್ಸಿಕ್ ವಿಭಾಗದ ವೈದ್ಯಾಧಿಕಾರಿಯವರ ಎದುರು ಹಾಜರುಪಡಿಸಿ ವೈದ್ಯಕೀಯ ತಪಾಸಣೆಗೊಳಪಡಿಸಿದ್ದು, ದಾವೂದ್ ಹಕೀಂ ಮಾದಕ ವಸ್ತುವಾದ ಗಾಂಜಾ ಸೇವಿಸಿರುವುದು ದೃಢಪಟ್ಟಿರುತ್ತದೆ.

ಈ ಬಗ್ಗೆ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.