ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಪಡುಬಿದ್ರಿ : ಬಿಲ್ಲವ ಸಮಾಜ ಸೇವಾ ಸಂಘ - 23ನೇ ವರ್ಷದ ಬ್ರಹ್ಮಶ್ರೀ ನಾರಾಯಣ ಗುರುಮೂರ್ತಿ ಪ್ರತಿಷ್ಠಾಪನಾ ಮಹೋತ್ಸವ

Posted On: 14-04-2023 12:28PM

ಪಡುಬಿದ್ರಿ : ಇಲ್ಲಿನ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಏಪ್ರಿಲ್ 16, ಆದಿತ್ಯವಾರ 23ನೇ ವರ್ಷದ ಬ್ರಹ್ಮಶ್ರೀ ನಾರಾಯಣ ಗುರುಮೂರ್ತಿ ಪ್ರತಿಷ್ಠಾಪನಾ ಮಹೋತ್ಸವವು ಜರಗಲಿದೆ.

ಬೆಳಿಗ್ಗೆ ಗಂಟೆ 7ರಿಂದ 9 ರವರೆಗೆ ಗಣಹೋಮ ಹಾಗೂ ಕಲಶಾಭಿಷೇಕ, ಬೆಳಿಗ್ಗೆ 9:30ರಿಂದ ಸಂಜೆ 6 ಗಂಟೆಯವರೆಗೆ ವಿವಿಧ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಗಂಟೆ 1 ರಿಂದ ಅನ್ನ ಸಂತರ್ಪಣೆ, ಸಂಜೆ ಗಂಟೆ 6:30ಕ್ಕೆ ಮಹಾಮಂಗಳಾರತಿ ಜರಗಲಿದೆ ಎಂದು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಪ್ರಕಟನೆ ತಿಳಿಸಿದೆ.