ಪಡುಬಿದ್ರಿ : ಕಂಚಿನಡ್ಕ ಮತಗಟ್ಟೆಗೆ ಜಿಲ್ಲಾಧಿಕಾರಿ ಸೇರಿದಂತೆ ತಾಲೂಕು ಅಧಿಕಾರಿ ವರ್ಗ ಭೇಟಿ
Posted On:
15-04-2023 10:58PM
ಪಡುಬಿದ್ರಿ : ಇಲ್ಲಿನ ನಡ್ಸಾಲು ಗ್ರಾಮದ ಕಂಚಿನಡ್ಕದ ವಲ್ನರೇಬಲ್ ಮತಗಟ್ಟೆಗೆ ಉಡುಪಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹಾಗೂ ಕಾಪು ತಾಲೂಕು ಅಧಿಕಾರಿ ವರ್ಗ ಭೇಟಿ ನೀಡಿದರು.
ಈ ಸಂದರ್ಭ ಸಾರ್ವಜನಿಕರಿಗೆ ಯಾವುದೇ ಒತ್ತಡ ಆಮಿಷಗಳಿಗೆ ಒಳಗಾಗದೇ ನಿರ್ಭೀತಿಯಿಂದ ಮತ ಚಲಾಯಿಸುವಂತೆ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭ ಸ್ಥಳೀಯರು ಮತ್ತು ಅಧಿಕಾರಿ ವರ್ಗ ಉಪಸ್ಥಿತರಿದ್ದರು.