ಕಾಪು ತಾಲೂಕು ಪರಿವಾರ ನಾಯಕ ಸಂಘದ ನೂತನ ಅಧ್ಯಕ್ಷರಾಗಿ ನೀಲಾನಂದ ನಾಯ್ಕ್ ಆಯ್ಕೆ
Posted On:
26-04-2023 02:25PM
ಕಾಪು : ತಾಲೂಕು ಪರಿವಾರ ನಾಯಕ ಸಂಘದ ನೂತನ ಅಧ್ಯಕ್ಷರಾಗಿ ನೀಲಾನಂದ ನಾಯ್ಕ್ ಆಯ್ಕೆ ಆಗಿದ್ದಾರೆ.
ಇವರು ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯೂ ಆಗಿದ್ದು, ವಿವಿಧ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ.
ವೃತ್ತಿಯಲ್ಲಿ ಅಧ್ಯಾಪಕರಾಗಿರುವ ಇವರು ಪ್ರಸ್ತುತ ಕಾಪು ದಂಡತೀರ್ಥ ಶಿಕ್ಷಣ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.