ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಟಪಾಡಿ : ಬಿಜೆಪಿ ಪಕ್ಷವು ವೋಟ್ ಬ್ಯಾಂಕ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ - ಕೇಂದ್ರ ಗೃಹ ಮಂತ್ರಿ ಅಮಿತ್ ಶಾ

Posted On: 29-04-2023 04:54PM

ಕಟಪಾಡಿ : ಕಾಂಗ್ರೆಸ್ ಪಕ್ಷವು ದೇಶದ ಸುರಕ್ಷತೆಯನ್ನು ವೋಟ್ ಬ್ಯಾಂಕ್ ರಾಜಕೀಯದ ಮೂಲಕ ಆಟವಾಡಿಸುತ್ತಿದೆ. ಬಿಜೆಪಿ ಪಕ್ಷವು ವೋಟ್ ಬ್ಯಾಂಕ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ. ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲಾತಿ ಮತ್ತೆ ತರುತ್ತಾರೆ. ಬಿಜೆಪಿ ಯಾವತ್ತೂ ತರುವುದಿಲ್ಲ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಇಂದು ಬಿಜೆಪಿ ಅಭ್ಯರ್ಥಿ ಮತ ಪ್ರಚಾರದ ಅಂಗವಾಗಿ ಕಟಪಾಡಿಯ ಗ್ರೀನ್ ವ್ಯಾಲಿ ಮೈದಾನದಲ್ಲಿ ಜರಗಿದ ಬಹಿರಂಗ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.

ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದ ಪಿ ಎಫ್ ಐ ಬ್ಯಾನ್ ಮಾಡಿದ ಕೀರ್ತಿ ಬಿಜೆಪಿಗೆ ಇದೆ. ದಕ್ಷಿಣ ಭಾರತವನ್ನು ಸುರಕ್ಷಿತವಾಗಿಸಿದ್ದೇವೆ. ಈ ಸಂದರ್ಭ ಮಾಜಿ ಸಚಿವ ವಿ.ಎಸ್ ಆಚಾರ್ಯ ರನ್ನು ಸ್ಮರಿಸಿದರು.

ಕಟಪಾಡಿ ಬೂತ್ ನ ಅಧ್ಯಕ್ಷರಾದ ಶ್ರೀಧರ ಪೂಜಾರಿ ಅಮಿತ್ ಷಾ ರನ್ನು ವೇದಿಕೆಗೆ ಬರಮಾಡಿಕೊಂಡರು. ಬಿಜೆಪಿ ಜಿಲ್ಲಾ ಸಮಿತಿಯ ಪರವಾಗಿ ನಾರಾಯಣಗುರುಗಳ ಮೂರ್ತಿಯನ್ನು ನೀಡಿ ಗೌರವಿಸಲಾಯಿತು.

ಈ ಸಂದರ್ಭ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕಾಪು ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ಚುನಾವಣಾ ಪ್ರಭಾರಿ ವಿಜೇಂದ್ರ ಗುಪ್ತ, ಶಾಸಕರಾದ ಲಾಲಾಜಿ ಆರ್ ಮೆಂಡನ್, ರಘುಪತಿ ಭಟ್, ಬಿಜೆಪಿ ಅಭ್ಯರ್ಥಿಗಳಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಮಟ್ಟಾರು ರತ್ನಾಕರ ಹೆಗ್ಡೆ, ಪ್ರಮೋದ್ ಮಧ್ವರಾಜ್, ಗೀತಾಂಜಲಿ ಸುವರ್ಣ, ಶಿಲ್ಪಾ ಜಿ ಸುವರ್ಣ, ದಿನಕರ ಬಾಬು, ಶ್ರೀಶ ನಾಯಕ್, ವೀಣಾ ಎಸ್ ಶೆಟ್ಟಿ, ಸುರೇಂದ್ರ ಪಣಿಯೂರು, ಸುಲೋಚನಾ ಭಟ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ನಯನ ಗಣೇಶ್, ಉದಯ ಕುಮಾರ್ ಶೆಟ್ಟಿ, ನವೀನ್ ಕುತ್ಯಾರು, ಪ್ರತಾಪ್ ಸಿಂಹ ಮತ್ತಿತರರು ಉಪಸ್ಥಿತರಿದ್ದರು.