ಕಾಪು : ಯುವ ನಾಯಕ, ಮೊಗವೀರ ಮುಂದಾಳು ಹೆಜಮಾಡಿ ಗ್ರಾಮ ಪಂಚಾಯತ್ ಪಕ್ಷೇತರ ಸದಸ್ಯ ರೋಶನ್ ನೇತೃತ್ವದಲ್ಲಿ ನೂರಾರು ಯುವಕರು ಇಂದು ಕಾಂಗ್ರೆಸ್ ಗೆ ಸೇರ್ಪಡೆಯಾದರು.
ಕಾಪು ರಾಜೀವ ಭವನದಲ್ಲಿ ನಡೆದ ಯುವ ಕಾಂಗ್ರೆಸ್ ಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಮಾತನಾಡಿದ ರೋಶನ್, ಯಾವುದೇ ಕಪ್ಪು ಚುಕ್ಕೆ ಇಲ್ಲದ ಪ್ರಾಮಾಣಿಕ ರಾಜಕಾರಣಿ ವಿನಯ ಕುಮಾರ್ ಸೊರಕೆಯವರ ವ್ಯಕ್ತಿತ್ವಕ್ಕೆ ಮನಸೋತು ಕಾಂಗ್ರೆಸ್ ಸೇರ್ಪಡೆ ಯಾಗುತ್ತಿದ್ದೇವೆ. ರಾಜ್ಯದಲ್ಲಿ 40 % ಸರ್ಕಾರ ಇದ್ರೆ ಬಿಜೆಪಿ ನೇತೃತ್ವದ ಹೆಜಮಾಡಿ ಪಂಚಾಯತ್ ನಲ್ಲಿ 20% ಕಮಿಷನ್ ಸರ್ಕಾರದ ಆಡಳಿತ ನಡೀತಾ ಇದೆ. ಕೇವಲ noc ಗಾಗಿ ಪಂಚಾಯತ್ ಸದಸ್ಯನಾದ ನನ್ನ ಹತ್ರನೇ ಲಂಚ ಕೇಳಿದ್ದಾರೆ. ಪಂಚಾಯತ್ ನಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಾ ಇದೆ. ಪಕ್ಷೇತರನಾಗಿ ನನ್ನನ್ನು ಗೆಲ್ಲಿಸಿದ ನನ್ನ ಗ್ರಾಮಸ್ಥರ ಕೆಲಸ ಆಗ್ತಾ ಇಲ್ಲ. ಇದರಿಂದ ರೋಸಿ ಹೋಗಿ ಕಾಂಗ್ರೆಸ್ ಪಕ್ಷಕ್ಕೆ ನಾನು ನನ್ನ ಸ್ನೇಹಿತರು ಸ್ವ ಇಚ್ಛೆಯಿಂದ ಸೇರ್ಪಡೆ ಗೊಂಡಿದ್ದೀವಿ. ಕರಾವಳಿ ಉದ್ದಕ್ಕೂ ಪಕ್ಷ ಸಂಘಟನೆ ಮಾಡಿ ಸೊರಕೆಯವರನ್ನು ಭಾರೀ ಅಂತರದ ಗೆಲುವಿಗಾಗಿ ನನ್ನ ತಂಡ ಇಂದಿನಿಂದಲೇ ಕೆಲಸ ಮಡುತ್ತೆ ಅಂತಾ ರೋಶನ್ ಹೇಳಿದರು.
ಕಾಪು ಭಾಗದ ಕ್ರೀಯಾಶೀಲ ಸಮಾಜಮುಖಿ ಕಾರ್ಯಕರ್ತೆ ಫರ್ಜಾನ ಕಾಪು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಈ ಸಂದರ್ಭ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಮಾತನಾಡಿ ಯುವ ಜನತೆಯ ಆಶೋತ್ತರಗಳಿಗೆ ತುರ್ತು ಸ್ಪಂದಿಸುವ ಕೆಲಸಕ್ಕೆ ನನ್ನ ಮೊದಲ ಆದ್ಯತೆ. ಈಗಾಗಲೇ ನನ್ನ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಕೈಗಾರಿಕಾ ವಲಯವನ್ನು ಸ್ಥಾಪಿಸಿ ಪ್ರತೀ ಮನೆಯಲ್ಲಿ ಒಬ್ಬರಿಗೆ ಉದ್ಯೋಗ ನೀಡುವ ಕೆಲಸವನ್ನು ನಾನು ಮಾಡುತ್ತೇನೆ ಎಂದರು.
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ ಯುವ ಶಕ್ತಿಯ ಸದ್ಭಳಕೆಯಾಗಬೇಕು. ಯುವಶಕ್ತಿ ಹೆಚ್ಚು ಕೆಲಸ ಮಾಡಿದಷ್ಟು ಗೆಲುವಿನ ವೇಗ ಜಾಸ್ತಿಯಾಗುತ್ತದೆ. ಸ್ವಚ್ಚ ಮನಸ್ಸಿನ ರಾಜಕಾರಣಿ ವಿನಯ ಕುಮಾರ್ ಸೊರಕೆಯವರ ಭಾರೀ ಅಂತರದ ಗೆಲುವಿಗಾಗಿ ಯುವಶಕ್ತಿ ಪ್ರಯತ್ನಿಸಬೇಕಾಗಿದೆ ಎಂದರು.
ಕೆ.ಪಿ.ಸಿ.ಸಿ ಕಾರ್ಯದರ್ಶಿ ರಾಜಶೇಖರ ಕೋಟ್ಯಾನ್ , ದೇವಿಪ್ರಸಾದ್ ಶೆಟ್ಟಿ ಬೆಳಪು , ಕೆ.ಪಿ.ಸಿ.ಸಿ ಸಂಯೋಜಕ ನವೀನಚಂದ್ರ ಜೆ ಶೆಟ್ಟಿ. ಕೆ.ಪಿ.ಸಿ.ಸಿ ಸಂಯೋಜಕ ಅಬ್ದುಲ್ ಅಜೀಜ್ , ರಾಜ್ಯ ಮೀನುಗಾರರ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಅಖೀಲೇಶ್ ಕೋಟ್ಯಾನ್ , ಜಿಲ್ಲಾ ಕಾಂಗ್ರೆಸ್ ಮೀನುಗಾರರ ಸಮಿತಿ ಅಧ್ಯಕ್ಷ ವಿಶ್ವಾಸ್ ಅಮೀನ್ , ಪ್ರಚಾರ ಸಮಿತಿ ಅಧ್ಯಕ್ಷ ಜಿತೇಂದ್ರ ಪೂಟಾರ್ಡೊ, ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೇನ್ , ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತಲತಾ ಶೆಟ್ಟಿ , ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವೈ ಸುಕುಮಾರ್ , ದಲಿತ ಮುಖಂಡ ಶೇಖರ್ ಹೆಜಮಾಡಿ , ಕಾಪು ಬ್ಲಾಕ್ ಹಿಂದುಳಿದ ವರ್ಗದ ಅಧ್ಯಕ್ಷ ದೀಪಕ್ ಎರ್ಮಾಳ್ ಉಪಸ್ಥಿತರಿದ್ದರು. ಸಂತೋಷ್ ಪಡುಬಿದ್ರಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.