ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಗೆದ್ದಲು ತಿನ್ನುತ್ತಿರುವ 2 ಸಾವಿರ ಮನೆ ನಿವೇಶನದ ಅರ್ಜಿಗಳನ್ನು ಮತ್ತೆ ಓಪನ್ ಮಾಡುತ್ತೇನೆ : ವಿನಯ ಕುಮಾರ್ ಸೊರಕೆ

Posted On: 02-05-2023 04:53PM

ಉಡುಪಿ : ನಾನು ಶಾಸಕನಾಗಿದ್ದ ಕಾಲದಲ್ಲಿ 94 ಸಿ ಕಾನೂನು ಮತ್ತು ಅಕ್ರಮ‌ ಸಕ್ರಮ ಯೋಜನೆಯಡಿ 2 ಸಾವಿರ ಅರ್ಜಿಯನ್ನು ಈ ಭಾಗದಲ್ಲಿ ಶಿಫಾರಸು ಮಾಡಿದ್ದೇನೆ. ನಾನು‌ ಶಿಫಾರಸು ಮಾಡಿದ ಅರ್ಜಿಯನ್ನು ಸಂಪೂರ್ಣವಾಗಿ ತಿರಸ್ಕರಿಸಲಾಗಿದೆ ಎಂದು ವಿನಯ ಕುಮಾರ್ ಸೊರಕೆ ಹೇಳಿದ್ದಾರೆ. ಪೆರ್ಡೂರು ಪೇಟೆಯಲ್ಲಿ‌ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ನಾನು ಶಿಫಾರಸು ಮಾಡಿದ ಎಲ್ಲಾ ಅರ್ಜಿಗಳು ಗೆದ್ದಲು ಹಿಡಿದಿದ್ದು ಅರ್ಜಿಯ ಕಟ್ಟನ್ನು ಮತ್ತೆ ಓಪನ್ ಅದಕ್ಕೆ ಮರು‌ಜೀವ ಕೊಟ್ಟು ಬಡವರಿಗೆ ಮನೆ ಮಂಜೂರಾತಿ ಮಾಡುವ ಕೆಲಸವನ್ನು ಮಾಡುತ್ತೇನೆ ಎಂದು ಅವರು ಹೇಳಿದರು. ರಸ್ತೆ ಅಗಲೀಕರಣಕ್ಕೆ ಸಂಬಂಧಪಟ್ಟಂತೆ ಬೈಪಾಸ್ ರಸ್ತೆ ಮೂಲಕ ಪೆರ್ಡೂರು ದೇವಸ್ಥಾನಕ್ಕೆ ಹಾನಿ ಆಗದ ಹಾಗೇ ರಸ್ತೆ ಅಗಲೀಕರಣ ಮಾಡಬೇಕಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಬಹಳಷ್ಟು ರಾಜಕೀಯ ಮಾಡ್ತಾ ಇದೆ. ಈಗಿನ ವ್ಯವಸ್ಥೆಯಲ್ಲಿ ಮಾಡೋದಾದಲ್ಲಿ ದೇವಸ್ಥಾನದ ಅರ್ಚಕರು ತಿಳಿಸಿದಂತೆ ಪಾಣಿಗ್ರಹದಲ್ಲಿ ಕಂಪನ ಬರುತ್ತದೆ.‌ ಕೆರೆ, ರಥಬೀದಿ ಎಲ್ಲಾನು ನಾಶವಾಗುತ್ತದೆ. ದೇವಸ್ಥಾನಕ್ಕೆ ಧಕ್ಕೆ ಆಗುತ್ತದೆ. ‌ಬೈಪಾಸ್ ರಸ್ತೆ ಮೂಲಕ ಈ ಕಾಮಗಾರಿ ಆದರೆ ದೇವಸ್ಥಾನಕ್ಕೆ ಯಾವುದೇ ಧಕ್ಕೆ ಆಗುವುದಿಲ್ಲ. ದೇವಸ್ಥಾನಕ್ಕೆ ಧಕ್ಕೆ ಆಗದೇ ರಸ್ತೆ ಅಗಲೀಕರಣಕ್ಕೆ ನಾವು ಮುಂದುವರಿಸುತ್ತೇವೆ ಎಂದು ಸೊರಕೆ ಹೇಳಿದ್ದಾರೆ.

ಬಿಜೆಪಿ ದೇವಸ್ಥಾನದ ವಿಚಾರದಲ್ಲಿ ರಾಜಕೀಯ ಶುರುಮಾಡಿ ದೇವಸ್ಥಾನವನ್ನೆ ನಾಶ ಮಾಡಲು ಪ್ರಯತ್ನ ಮಾಡುತ್ತಿದೆ ಎಂದು ಸೊರಕೆ ಆಕ್ರೋಶ ವ್ಯಕ್ತಪಡಿಸಿದರು. ನನ್ನ ಕ್ಷೇತ್ರದಾದ್ಯಂತ ಕುಡಿಯುವ ನೀರಿನ‌ ಸಮಸ್ಯೆ ಬಹಳಷ್ಟು ಇದೆ. ಚುನಾವಣಾ ಸಂದರ್ಭದಲ್ಲಿ ಕುಡಿಯುವ‌ ನೀರಿಗೆ ಆದ್ಯತೆ ಕೊಡ್ತಾ ಇಲ್ಲ. ಮೂಲಭೂತ ಸೌಕರ್ಯದಿಂದ ಜನರನ್ನು ವಂಚಿತರಾಗುವ ಕೆಲಸವನ್ನು ಬಿಜೆಪಿ ಮಾಡ್ತಾ ಇದೆ. ಕುಡಿಯುವ ನೀರಿನ ಮೂಲ ಹುಡುಕುವ ಬದಲು ಪೈಪ್ ಲೈನ್ ಮಾತ್ರ ಹಾಕುವ ಕೆಲಸ ಆಗ್ತಿದೆ ಅಂತಾ ಸೊರಕೆ‌ ವ್ಯಂಗ್ಯವಾಡಿದರು.

ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮರೊಳಿ ಮಾತನಾಡಿ ಈಗಿನ ಬಿಜೆಪಿ ಅಭ್ಯರ್ಥಿಯ ಮೇಲೆ ಎರಡು ಕ್ರಿಮಿನಲ್ ಕೇಸ್ ದಾಖಲಾಗಿದೆ ಎಂದು ಅವರೇ ಸಲ್ಲಿಸಿದ ಅಫಿದಾವಿತ್ ದಾಖಲಾಗಿದೆ. ಗಣಿ ಲೂಟಿಯಲ್ಲಿ ಸರಕಾರಕ್ಕೆ 81 ಕೋಟಿ ವಂಚಿಸಿದ ಪ್ರಕರಣ ಇದರಲ್ಲಿ ಮುಖ್ಯವಾದದ್ದು. ಈ ಬಗ್ಗೆ ಜನರು ಯೋಚಿಸಬೇಕಾಗಿದೆ.‌ ಆಲೋಚಿಸಿ ಮತ ಹಾಕಬೇಕಾಗಿದೆ. ಕಮಲ‌ ಕೆರೆಯಲ್ಲಿದ್ದರೆ ಚಂದ, ತೆನೆ ಗದ್ದೆಯಲ್ಲಿದ್ದರೆ ಚಂದ, ಪ್ರಾಮಾಣಿಕವಾದ ಕೈ ಅಧಿಕಾರದಲ್ಲಿದ್ದರೆ ಚಂದ ಅಂತೆ. ಹಾಗಾಗಿ ಪ್ರಾಮಾಣಿಕ ರಾಜಕಾರಣಿ ಸೊರಕೆ ಉತ್ತಮ ಆಯ್ಕೆ ಎಂದು ಮರೋಳಿ ಅಭಿಪ್ರಾಯ ಪಟ್ಟರು. ಕಾಂಗ್ರೆಸ್ ಮುಖಂಡರಾದ ಶಾಂತಾರಾಮ‌ಸೂಡ, ಚರಣ್ ವಿಠಲ್ ಕುದಿ, ಜಿತೇಂದ್ರ ಫುಟಾರ್ಡೊ, ಸಂತೋಷ್ ಕುಲಾಲ್ ಉಪಸ್ಥಿತರಿದ್ದರು.