ಕಾಪು : ಪಡುಕುತ್ಯಾರಿನಲ್ಲಿ ಜಗದ್ಗುರು ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ತಮ್ಮ ಅಭಿವೃದ್ಧಿ ಯೋಜನೆಗಳ ಬಗ್ಗೆ, ಸರಕಾರದ ಯೋಜನೆಗಳ ಬಗ್ಗೆ ಸ್ವಾಮೀಜಿಯವರೊಂದಿಗೆ ಸಮಾಲೋಚನೆ ಮಾಡಿದರು.
ಈ ಸಂದರ್ಭ ಕಾಂಗ್ರೆಸ್ ಪಕ್ಷದ ಪ್ರಮುಖರಾದ ದಿವಾಕರ ಡಿ ಶೆಟ್ಟಿ, ರಾಜೇಶ್ ಕುಲಾಲ್, ದಿವಾಕರ ಬಿ. ಶೆಟ್ಟಿ, ಜಾನ್ಸನ್ ಕಾರ್ಕಡ, ಶಶಿಕಾಂತ್ ಆಚಾರ್ಯ, ಪ್ರಭಾಕರ ಆಚಾರ್ಯ, ರತನ್ ಶೆಟ್ಟಿ ಉಪಸ್ಥಿತರಿದ್ದರು.