ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಈ ಚುನಾವಣೆಯು ಧರ್ಮ ಅಧರ್ಮದ ಚುನಾವಣೆ : ಗುರ್ಮೆ ಸುರೇಶ್ ಶೆಟ್ಟಿ

Posted On: 05-05-2023 09:41AM

ಕಾಪು : ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲಾರ್ ಕುಂಜಿ ಗುಡ್ಡೆ ಪ್ರದೇಶದಲ್ಲಿ ಮಾತಯಾಚನೆ ಮಾಡಿದರು.

ಈ ಸಂಧರ್ಭ ನೆರೆದಿದ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಗುರ್ಮೆ ಸುರೇಶ್ ಶೆಟ್ಟಿಯವರು ಈ ಚುನಾವಣೆಯು ಧರ್ಮ ಅಧರ್ಮದ ಚುನಾವಣೆ ಯಾರ ಬಗ್ಗೆಯೂ ಅಪಪ್ರಚಾರ ಮಾಡದೆ ನಮ್ಮ ವಿಚಾರಗಳು ಪ್ರಚಾರ ಆಗಬೇಕು ಎಂಬ ಮಾತನ್ನು ಹೇಳಿದರು. ಕಾಪು ಕ್ಷೇತ್ರ ಅಭಿವೃದ್ಧಿಯ ತಾಣವಾಗಬೇಕು ಹಲವಾರು ಕಾರ್ಯಗಳನ್ನು ನಡೆಸಿಕೊಡುವುದಾಗಿ ಭರವಸೆ ನೀಡಿದರು.

ಈ ಸಂಧರ್ಭ ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾದ ಲಾಲಾಜಿ ಮೆಂಡನ್ ರವರು, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶರತ್ ಶೆಟ್ಟಿ, ಮುದರಂಗಡಿ ಶಕ್ತಿಕೇಂದ್ರ ಅಧ್ಯಕ್ಷರಾದ ಶಿವರಾಮ್ ಭಂಡಾರಿ, ಪೆರ್ನಾಲ್ ಭೂತ್ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ ಹಾಗೂ ಉದಯ್, ಬೆಳ್ಮಣ್ ಪಂಚಾಯತ್ ಸದಸ್ಯರಾದ ಶಂಕರ್ ಕುಂದರ್ ಸೂಡ ಹಾಗೂ ಪಕ್ಷದ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.