ಪಡುಬಿದ್ರಿ : ಚಾಲಕನ ನಿಯಂತ್ರಣ ತಪ್ಪಿದ ಬಸ್ ; ಆಟೋ ರಿಕ್ಷಾ ಜಖಂ
Posted On:
16-05-2023 11:24AM
ಪಡುಬಿದ್ರಿ : ಮಂಗಳೂರಿನಿಂದ ಕಾರ್ಕಳ ಹೋಗುವ ವೇಗದೂತ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಾರ್ಕಳ ಜಂಕ್ಷನ್ ನಲ್ಲಿದ್ದ ಪೋಲೀಸ್ ಬೂತ್ ಗೆ ಡಿಕ್ಕಿ ಹೊಡೆದು ಅದನ್ನು ಸುಮಾರು ನೂರು ಅಡಿ ಎಳೆದೊಯ್ದು ರಿಕ್ಷಾ ಸ್ಟ್ಯಾಂಡ್ ಗೆ ನುಗ್ಗಿದ ಬಸ್ಸು ಒಂದು ಆಟೋ ರಿಕ್ಷಾ ವನ್ನು ಸಂಪೂರ್ಣ ಜಖಂ ಗೊಳಿಸಿದ ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.
ಅದ್ರಷ್ಟವಶಾತ್ ಬಸ್ ಅಲ್ಲಿಗೆ ನಿಂತಿದ್ದರಿಂದ ಹಲವರು ತಮ್ಮ ಪ್ರಾಣ ಕಳಕೊಳ್ಳವುದು ತಪ್ಪಿದೆ. ಪಕ್ಕದಲ್ಲಿ ಬ್ಯಾಂಕ್ ಎಟಿಎಂ ಅಲ್ಲದೆ ಹಲವಾರು ಅಂಗಡಿಗಳಿದ್ದು ಜನನಿಭಿಡ ಪ್ರದೇಶವಾಗಿತ್ತು.
ಹೈವೇ ಪಕ್ಕ ಅಪಘಾತ ಸಂಭವಿಸಿದ ಕಾರಣ ಸ್ವಲ್ಪ ಹೊತ್ತು ಟ್ರಾಫಿಕ್ ಜಾಂ ಆಗಿದೆ. ಪಡುಬಿದ್ರಿ ಪೋಲಿಸ್ ಸ್ಥಳಕ್ಕೆ ಧಾವಿಸಿ ಸುಗಮ ಸಂಚಾರಕ್ಕೆ ಅನುವು ಮಾಡುವ ಮೂಲಕ ತನಿಖೆ ನಡೆಸುತ್ತಿದ್ದಾರೆ.