ಉಡುಪಿ : ನಗರದ ಮೈತ್ರಿ ಕಾಂಪ್ಲೆಕ್ಸ್ ನಲ್ಲಿರುವ ಚಿನ್ನದ ಸಾಲದ ಕಂಪನಿಯಾದ ಮುತ್ತೂಟ್ ಫ಼ೈನಾನ್ಸ್ ಸಂಸ್ಥೆಯ ಎಮ್ ಜಾರ್ಜ್ ಫೌಂಡೆಶನ್ ವತಿಯಿಂದ ಮಂಜೂರಾದ ಮೆಡಿಕಲ್ ಚಾರಿಟಿಯ ಚೆಕ್ ನ್ನು ಸಕ್ಕರೆ ಖಾಯಿಲೆಯಿಂದ ಬಳಲುತ್ತಿರುವ ಕಟಪಾಡಿಯ ಲಕ್ಷ್ಮಿಬಾಯಿ ಚಂದ್ರಪ್ಪರವರಿಗೆ ಕಟಪಾಡಿಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಇಂದಿರ ಆಚಾರ್ಯರವರು ಹಸ್ತಾರಿಸಿದರು.
ಈ ಸಂದರ್ಭದಲ್ಲಿ ಶಿಕ್ಷಕ ಪ್ರಭಾಕರ ಕೆ ಪಾಲನ್, ಪ್ರಬಂಧಕ ಗಣೇಶ್ ಭಟ್, ಮುತ್ತೂಟ್ ಫ಼ೈನಾನ್ಸ್ ಲಿಮಿಟೆಡ್ ಉಡುಪಿ ಮತ್ತು ಮುತ್ತೂಟ್ ಫ಼ೈನಾನ್ಸ್ ಸಿಬ್ಬಂದಿ ಮಂಜುನಾಥ್ ಬಿ. ಉಪಸ್ಥಿತರಿದ್ದರು.