ಉಚ್ಚಿಲ : ಅಪಘಾತಕ್ಕೀಡಾಗಿ ಸಾವಾದ ವಾನರದ ಅಂತ್ಯ ಸಂಸ್ಕಾರ ನಡೆಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು
Posted On:
04-06-2023 08:35PM
ಉಚ್ಚಿಲ : ರಾಷ್ಟೀಯ ಹೆದ್ದಾರಿ 66ರ ಉಚ್ಚಿಲ ನಾರಾಯಣಗುರು ರಸ್ತೆ ಬಳಿ ರಸ್ತೆ ಅಪಘಾತದಲ್ಲಿ ಅಸುನೀಗಿದ ವಾನರನಿಗೆ ಭಜರಂಗದಳ ಹಾಗೂ ವಿಶ್ವ ಹಿಂದು ಪರಿಷದ್ ಕಾರ್ಯಕರ್ತರಿಂದ ಭಕ್ತಿ ಶ್ರದ್ಧಾ ಪೂರ್ವಕ ಅಂತ್ಯ ಸಂಸ್ಕಾರ ನಡೆಸಿದ ಘಟನೆಯು ಉಚ್ಚಿಲದಲ್ಲಿ ಶನಿವಾರ ನಡೆದಿದೆ.
ಬೆಳಿಗ್ಗೆ 11 ಗಂಟೆಯ ಸುಮಾರಿಗೆ ರಾಷ್ಟೀಯ ಹೆದ್ದಾರಿ 66ರಲ್ಲಿ ಕಾರೊಂದು ಡಿಕ್ಕಿ ಹೊಡೆದು ವಾನರ ಗಾಯಗೊಂಡಿತ್ತು. ಕೂಡಲೇ ಕಾರ್ಯಕರ್ತರು ಪಶು ಚಿಕಿತ್ಸಾಲಯಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಲು ಪ್ರಯತ್ನ ಪಟ್ಟಿದ್ದಾರೆ ಚಿಕಿತ್ಸೆಗೆ ಸ್ಪಂದಿಸದ ವಾನರ ಅಸು ನೀಗಿತ್ತು. ಪರಿಶೀಲನೆ ನಡೆಸಿದ ವೈದ್ಯರು ಸಾವನ್ನು ಧೃಡಪಡಿಸಿದ್ದರು.
ಬಳಿಕ ಪುರೋಹಿತರ ಮಾರ್ಗದರ್ಶನದಂತೆ ಹಿಂದೂ ಸಂಘಟನೆಯ ಕಾರ್ಯಕರ್ತರಾದ ಮಹೇಶ್, ಸಂದೀಪ್, ವಿಶು, ಮನೋಜ್ ಸೇರಿ ಅಂತ್ಯಸಂಸ್ಕಾರದ ವಿಧಿವಿಧಾನ ನೆರವೇರಿಸಿದರು.