ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಶಿರ್ವ : ಬಂಟಕಲ್ಲು ಆಟೋ ರಿಕ್ಷಾ ಚಾಲಕ ಮತ್ತು ಮಾಲಕ ಸಂಘದ ಅಧ್ಯಕ್ಷರಾಗಿ ಮಂಜುನಾಥ ಪೂಜಾರಿ ಆಯ್ಕೆ

Posted On: 10-06-2023 07:06AM

ಶಿರ್ವ : ಬಂಟಕಲ್ಲು ಆಟೋ ರಿಕ್ಷಾ ಚಾಲಕ ಮತ್ತು ಮಾಲಕ ಸಂಘದ ಅಧ್ಯಕ್ಷರಾಗಿ ಬಂಟಕಲ್ಲು ಶ್ರೀ ಗಣೇಶೋತ್ಸವ ಸಮಿತಿಯ ಉಪಾಧ್ಯಕ್ಷರು, ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ಬಂಟಕಲ್ಲು ಇದರ ಗುರುಸ್ವಾಮಿ ಆಗಿರುವ ಮಂಜುನಾಥ ಪೂಜಾರಿ ಇವರು ತೃತೀಯ ಬಾರಿಗೆ ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಬಂಟಕಲ್ಲು ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿರುವ ಮಾಧವ ಕಾಮತ್, ಉಪಾಧ್ಯಕ್ಷರಾಗಿ ಸತೀಶ್ ಅರಸಿಕಟ್ಟೆ, ಕಾರ್ಯದರ್ಶಿಯಾಗಿ ಡೆನಿಸ್ ಡಿಸೋಜ, ಜೊತೆ ಕಾರ್ಯದರ್ಶಿಯಾಗಿ ದಿವಾಕರ ಶೆಟ್ಟಿ, ಕೋಶಾಧಿಕಾರಿ ಸುಧಾಕರ್ ಅರಸಿಕಟ್ಟೆ, ಕ್ರೀಡಾ ಕಾರ್ಯದರ್ಶಿ ಅಶೋಕ್ ಅರಸಿಕಟ್ಟೆ, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಉಮೇಶ್ ಪ್ರಭು ಪಾಲಮೆ, ರಾಘವೇಂದ್ರ ಹೇರೂರು, ಶೈಲೇಶ್ ಕಲ್ಲುಗುಡ್ಡೆ, ವಿಠಲ ಮೂಲ್ಯ ಅರಸಿಕಟ್ಟೆ, ನವೀನ್ ಸನಿಲ್, ಕೇಶವ, ರವಿ ಕುಲಾಲ್, ಸುರೇಶ್ ಕುಲಾಲ್, ಹರೀಶ್ ಹೇರೂರು, ಗೋಪಾಲ್ ದೇವಾಡಿಗ ಹೇರೂರು ಆಯ್ಕೆಯಾಗಿದ್ದಾರೆ.