ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಶ್ರೀ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯ ತಾತ್ಕಾಲಿಕ ಗುಡಿಯ ಸಾನ್ನಿಧ್ಯ ಚಾಲನಾ ಸಮಾರಂಭ

Posted On: 12-06-2023 11:54AM

ಕಾಪು : ಶ್ರೀ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯ ತಾತ್ಕಾಲಿಕ ಗುಡಿಗೆ ಸಾನ್ನಿಧ್ಯ ಚಾಲನಾ ಸಮಾರಂಭ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಇಂದು ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಜರಗಿತು.

ಜ್ಯೋತಿರ್ವಿವಿದ್ವಾನ್ ಕೆ.ಜಿ ರಾಘವೇಂದ್ರ ತಂತಿ ಕೊರಂಗ್ರಪಾಡಿ ಆಶೀರ್ವಚಿಸಿ ಜ್ಯೋತಿರ್ವಿವಿದ್ವಾನ್ ಕೆ.ಪಿ ಕುಮಾರಗುರು ತಂತ್ರಿ ಕೊರಂಗ್ರಪಾಡಿ ಶುಭಾಶಂಸನೆ ನೀಡಿದರು.

ಈ ಸಂದರ್ಭದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಮುಂಬೈ ಕಾರ್ಯಾಧ್ಯಕ್ಷರಾದ ರವಿ ಸುಂದರ್ ಶೆಟ್ಟಿ, ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಪುಣೆ ಮಾಧವ ಶೆಟ್ಟಿ, ಮುಂಬೈ ಕೃಷ್ಣ ಪ್ಯಾಲೇಸ್ ಗ್ರೂಪ್ ನ ಕೃಷ್ಣ ಶೆಟ್ಟಿ, ವಿಶ್ವನಾಥ ಕ್ಷೇತ್ರ ಕಟಪಾಡಿ ಕ್ಷೇತ್ರ ಆಡಳಿತ ಮಂಡಳಿ ಅಧ್ಯಕ್ಷರಾದ ಬಿ.ಎನ್ ಶಂಕರ್ ಪೂಜಾರಿ, ಮೊಗವೀರ ಮಹಾಸಭಾ ಅಧ್ಯಕ್ಷರಾದ ಜಯ ಸಿ ಕೋಟ್ಯಾನ್, ವಿಶ್ವ ದೇವಾಡಿಗ ಮಹಾಮಂಡಲ ಅಧ್ಯಕ್ಷರಾದ ಧರ್ಮಪಾಲ ಯು ದೇವಾಡಿಗ, ಉಡುಪಿ ತಿರುಮಲ ಜುವೆಲರ್ಸ್ ನ ಗಂಗಾಧರ ಆಚಾರ್ಯ, ದಕ್ಷಿಣ ಕನ್ನಡ ಪದ್ಮಶಾಲಿ ಮಹಾಸಭಾ ಅಧ್ಯಕ್ಷರಾದ ರಾಮದಾಸ್ ಶೆಟ್ಟಿಗಾರ್, ಶ್ರೀ ಮಾಲ್ತಿದೇವಿ ದೇವಸ್ಥಾನ, ಬಬ್ಬುಸ್ವಾಮಿ ಮೂಲಕ್ಷೇತ್ರ ಕಚ್ಚೂರಿನ ಧರ್ಮದರ್ಶಿಗಳಾದ ಗೋಕುಲ್ ದಾಸ್, ಕೋಟೆ ಶ್ರೀ ಹಳೆ ಮಾರಿಯಮ್ಮ ದೇವಸ್ಥಾನ ಮಲ್ಲಾರು, ರಾಣ್ಯಕೇರಿ ಗುರಿಕಾರರಾದ ಜಯ ರಾಣ್ಯ, ಸೂರ್ಯ ಸಾಲಿಯಾನ್ ಮುಂಬೈ, ಪ್ರಭಾಕರ ಶೆಟ್ಟಿ ಮುಂಬೈ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯಾ, ಕ್ಷೇತ್ರದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.