ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾರ್ಕಳ : ಶ್ರೀಕ್ಷೇತ್ರ ಕೇಮಾರಿನಲ್ಲಿ "ಟೆಲಿಬರವು" ತಂತ್ರಾಂಶ ಲೋಕಾರ್ಪಣೆ

Posted On: 12-06-2023 07:41PM

ಕಾರ್ಕಳ : ತುಳುನಾಡಿನ ಜನರಿಗೆ ಜಾತಿಗಿಂತ ತುಳು ಸಂಸ್ಕೃತಿ ಮುಖ್ಯ, ದೇಶ ವಿದೇಶಕ್ಕೂ ಹೋದರೂ ತುಳು ಸಂಸ್ಕೃತಿಯನ್ನು ಮರೆಯಬಾರದು. ಆದರೆ ತುಳು ಭಾಷೆಯನ್ನು ಎಂಟನೇ ಪರೀಚ್ಛೇಧದಲ್ಲಿ ಸೇರಿಸುವಲ್ಲಿ ಈ ತನಕವೂ ಆಗದೇ ರಾಜಕಾರಣಿಗಳು ಕೇವಲ ಬಂಡಲ್ ಬಿಡುವಲ್ಲೇ ಕಾಲ ಕಳೆದರು ಎಂದು ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಖೇದ ವ್ಯಕ್ತಪಡಿಸಿದರು. ಜೈ ತುಲುನಾಡ್(ರಿ.) ಇದರ ನೇತೃತ್ವದಲ್ಲಿ ಶ್ರೀಕ್ಷೇತ್ರ ಕೇಮಾರಿನಲ್ಲಿ ಭಾನುವಾರ 'ಟೆಲಿಬರವು' ಎಂಬ ಆಪ್ ಲೋಕಾರ್ಪಣೆಗೊಳಿಸಿ ಅವರು ಆಶೀರ್ವಚನ ನೀಡಿ ಮಾತನಾಡಿದರು.

ಈ ವೇಳೆ 'ಟೆಲಿಬರವು' ತಂತ್ರಾಂಶದ ರಚನೆಕಾರರಾದ ಜ್ಙಾನೇಶ ದೇರಳಕಟ್ಟೆ ಇವರನ್ನು ಸನ್ಮಾನಿಸಲಾಯಿತು. ಈ ತಂತ್ರಾಂಶದಲ್ಲಿ ಕನ್ನಡದಲ್ಲಿ ಬರೆದಂತಹ ಅಕ್ಷರಗಳು ತುಳು ಲಿಪಿಗೆ ಪರಿವರ್ತನೆಯಾಗುತ್ತದೆ ಎಂದು ಸನ್ಮಾನಿತರಾದ ಜ್ಞಾನೇಶ್ ಹೇಳಿದರು. ಸುಮಂತ್ ಹೆಬ್ರಿ ತಂತ್ರಾಂಶದ ಬಗ್ಗೆ ಮಾಹಿತಿ ನೀಡಿದರು.

ಈ ಸಂಧರ್ಭ ಕೇಮಾರ್ ಕ್ಷೇತ್ರದ ನಾಮಫಲಕವನ್ನು ತುಲುಲಿಪಿಯಲ್ಲಿ ಅಳವಡಿಸಿ ಉದ್ಘಾಟಿಸಲಾಯಿತು.

ಜೈ ತುಲುನಾಡ್ ಸಂಘಟನೆಯ ಅಧ್ಯಕ್ಷ ವಿಶು ಶ್ರೀಕೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಐಕಳ ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷ ರಾಜೇಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಜೈ ತುಲುನಾಡ್ ಸಂಘಟನೆಯ ಉಪಾಧ್ಯಕ್ಷ ಉದಯ್ ಪೂಂಜಾ ಉಪಸ್ಥಿತರಿದ್ದರು. ಪೂರ್ಣಿಮಾ ಬಂಟ್ವಾಳ ಸನ್ಮಾನ ಪತ್ರ ವಾಚಿಸಿದರು. ಪವಿತ್ರ ಪೂಜಾರಿ ಸ್ವಾಗತಿಸಿ, ಅಕ್ಷತ ಧನ್ಯವಾದ ಅರ್ಪಿಸಿದರು. ಕಿರಣ್ ತುಲುವೆ ಕಾರ್ಯಕ್ರಮ ನಿರೂಪಿಸಿದರು.