ಕಾಪು : ಮೂಳೂರಿನಲ್ಲಿ ಕಡಲ ಕೊರೆತ ತೀವ್ರ - ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಅಧಿಕಾರಿಗಳ ಭೇಟಿ
Posted On:
15-06-2023 08:58PM
ಕಾಪು : ತಾಲೂಕಿನ ಮೂಳೂರು ತೊಟ್ಟಂ ಪ್ರದೇಶದಲ್ಲಿ ಕಡಲ ಕೊರೆತ ತೀವ್ರಗೊಂಡಿದ್ದು, ಗುರುವಾರ ಸಂಜೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಕಡಲ ಕೊರೆತ ವೀಕ್ಷಿಸಿದರು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಈ ಬಗ್ಗೆ ಇಲಾಖಾ ಅಧಿಕಾರಿಗಳಿಗೆ ತುರ್ತು ಸ್ಪಂದಿಸುವಂತೆ ಮನವಿ ಮಾಡುತ್ತೇವೆ. ಈ ಬಗ್ಗೆ ಶುಕ್ರವಾರ ಸಂಜೆ ಉಚ್ಚಿಲಕ್ಕೆ ಆಗಮಿಸಲಿರುವ ಮೀನುಗಾರಿಕಾ ಬಂದರು ಸಚಿವರ ಗಮನಕ್ಕೆ ತರಲಾಗುವುದು. ಬರುವ ವಾರದಲ್ಲಿ ಬರುವ ವಿಧಾನ ಸಭೆಯ ಅಧಿವೇಶನದಲ್ಲಿ ಈ ಬಗ್ಗೆ ಮಾತನಾಡುತ್ತೇನೆ ಎಂದು ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ.
ಬಂದರು ಮತ್ತು ಮೀನುಗಾರಿಕಾ ಇಲಾಖೆ ಅಧಿಕಾರಿಗಳು ಕಾಪು ಪುರಸಭಾ ಅಧಿಕಾರಿ ಸಂತೋಷ್ ಕುಮಾರ್, ಮುಖ್ಯ ಇಂಜಿನಿಯರ್ ನಯನ ತಾರಾ ಮತ್ತಿತರ ಅಧಿಕಾರಿಗಳು, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.