ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಮೂಳೂರಿನಲ್ಲಿ ಕಡಲ ಕೊರೆತ ತೀವ್ರ - ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಅಧಿಕಾರಿಗಳ ಭೇಟಿ

Posted On: 15-06-2023 08:58PM

ಕಾಪು : ತಾಲೂಕಿನ ಮೂಳೂರು ತೊಟ್ಟಂ ಪ್ರದೇಶದಲ್ಲಿ ಕಡಲ ಕೊರೆತ ತೀವ್ರಗೊಂಡಿದ್ದು, ಗುರುವಾರ ಸಂಜೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಕಡಲ ಕೊರೆತ ವೀಕ್ಷಿಸಿದರು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಈ ಬಗ್ಗೆ ಇಲಾಖಾ ಅಧಿಕಾರಿಗಳಿಗೆ ತುರ್ತು ಸ್ಪಂದಿಸುವಂತೆ ಮನವಿ ಮಾಡುತ್ತೇವೆ. ಈ ಬಗ್ಗೆ ಶುಕ್ರವಾರ ಸಂಜೆ ಉಚ್ಚಿಲಕ್ಕೆ ಆಗಮಿಸಲಿರುವ ಮೀನುಗಾರಿಕಾ ಬಂದರು ಸಚಿವರ ಗಮನಕ್ಕೆ ತರಲಾಗುವುದು. ಬರುವ ವಾರದಲ್ಲಿ ಬರುವ ವಿಧಾನ ಸಭೆಯ ಅಧಿವೇಶನದಲ್ಲಿ ಈ ಬಗ್ಗೆ ಮಾತನಾಡುತ್ತೇನೆ ಎಂದು ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ.

ಬಂದರು ಮತ್ತು ಮೀನುಗಾರಿಕಾ ಇಲಾಖೆ ಅಧಿಕಾರಿಗಳು ಕಾಪು ಪುರಸಭಾ ಅಧಿಕಾರಿ ಸಂತೋಷ್ ಕುಮಾರ್, ಮುಖ್ಯ ಇಂಜಿನಿಯರ್ ನಯನ ತಾರಾ ಮತ್ತಿತರ ಅಧಿಕಾರಿಗಳು, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.