ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಹೆಜಮಾಡಿ : ಶಾಸಕರಿಂದ ಬಂದರು ಕಾಮಗಾರಿ ಪರಿಶೀಲನೆ

Posted On: 24-06-2023 07:02AM

ಹೆಜಮಾಡಿ : ಇಲ್ಲಿ 188 ಕೋಟಿ ರೂಪಾಯಿ ಅನುದಾನ ಮಂಜೂರಾಗಿ ಶೇಕಡಾ 60 ರಷ್ಟು ಪೂರ್ಣಗೊಂಡಿರುವ ಬಂದರಿನ ಕಾಮಗಾರಿಯ ಪ್ರಗತಿ ಪರಿಶೀಲನೆಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಶುಕ್ರವಾರ ಭೇಟಿ ನೀಡಿದರು.

ಈ ಸಂದರ್ಭ ಶಾಸಕರು ಗುಣಮಟ್ಟವನ್ನು ಕಾಯ್ದುಕೊಂಡು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿ ಬಾಕಿ ಇರುವ ಅನುದಾನದ ಬಿಡುಗಡೆಯ ಬಗ್ಗೆ ಮೀನುಗಾರಿಕಾ ಸಚಿವರಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ಶೀಘ್ರದಲ್ಲಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪಾಂಡುರಂಗ, ಉಪಾಧ್ಯಕ್ಷರಾದ ಪವಿತ್ರ ಗಿರೀಶ್, ಹೆಜಮಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಾಣೇಶ್ ಹೆಜಮಾಡಿ, ಶರಣ್ ಮಟ್ಟು, ಜಗನ್ನಾಥ್, ನಳಿನಿ, ಸುಜಾತ, ಬಬಿತಾ, ಹೆಜಮಾಡಿ ಮೀನುಗಾರಿಕ ಬಂದರು ಸಮಿತಿಯ ಅಧ್ಯಕ್ಷರಾದ ಸದಾಶಿವ ಕೋಟ್ಯಾನ್, ಉಪಾಧ್ಯಕ್ಷರಾದ ರವಿ ಕುಂದರ್, ಪ್ರಧಾನ ಕಾರ್ಯದರ್ಶಿಗಳಾದ ವಿಜಯ ಬಂಗೇರ, ಮೀನುಗಾರ ಮುಖಂಡರಾದ ಹರೀಶ್ ಚಂದ್ರ ಮೆಂಡನ್, ನಾರಾಯಣ ಮೆಂಡನ್, ದಿವಾಕರ ಮೆಂಡನ್ ಮತ್ತು ಬಂದರು ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಶ್ರೀನಿವಾಸ್ ಮೂರ್ತಿ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಉದಯ್ ಕುಮಾರ್, ಸಹಾಯಕ ಅಭಿಯಂತರರಾದ ಜಯರಾಜ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.