ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಟಪಾಡಿ : ತ್ರಿಶಾ ವಿದ್ಯಾ ಕಾಲೇಜು - ಫೋಕಸ್ 360 ಬ್ಯಾಚ್ ವಿದ್ಯಾಥಿಗಳ ಶಿಕ್ಷಕ-ರಕ್ಷಕ ಭೇಟಿ

Posted On: 24-06-2023 11:14AM

ಕಟಪಾಡಿ : ಪದವಿ ಶಿಕ್ಷಣ ಎನ್ನುವುದು ಕೇವಲ ಪುಸ್ತಕದ ಜ್ಞಾನವನ್ನು ಹೊಂದುವುದಲ್ಲ. ವ್ಯವಹಾರ ಕ್ಷೇತ್ರಕ್ಕೆ ಬೇಕಾದ ಕೌಶಲ್ಯಗಳು ಹಾಗೂ ಜ್ಞಾನವನ್ನು ಹೊಂದುವುದೂ ಮುಖ್ಯವಾಗುತ್ತದೆ. ಇಲ್ಲವಾದರೆ ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮೂಲೆ ಗುಂಪಾಗಿ ಬಿಡುತ್ತೇವೆ. ಅದಲ್ಲದೆ ವಿದ್ಯಾರ್ಥಿಯನ್ನು ಸತ್ಪ್ರಜೆಯನ್ನಾಗಿ ಮಾಡೋದು ವಿದ್ಯಾ ಸಂಸ್ಥೆಯ ಜೊತೆಗೆ ಹೆತ್ತವರ ಜವಾಬ್ದಾರಿಯೂ ಆಗಿದೆ ಎಂದು ತ್ರಿಶಾ ಸಂಸ್ಥೆಯ ಅಧ್ಯಕ್ಷರಾದ ಸಿ.ಎ ಗೋಪಾಲಕೃಷ್ಣ ಭಟ್ ಅವರು ತ್ರಿಶಾ ಸಂಸ್ಥೆಯ 'ಬಿ.ಕಾಂ ಫೋಕಸ್ 360' ಮಕ್ಕಳ ಶಿಕ್ಷಕ-ರಕ್ಷಕ ಭೇಟಿಯಲ್ಲಿ ಹೇಳಿದರು.

ತ್ರಿಶಾ ವಿದ್ಯಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗುರುಪ್ರಸಾದ್ ರಾವ್ ಅವರು ಫೋಕಸ್ 360 ಬ್ಯಾಚ್ ನ ಕಾರ್ಯವೈಖರಿ ಹಾಗೂ ಮುಂದೆ ಬರುವ ಯೋಜನೆಗಳನ್ನು ಸವಿಸ್ತಾರವಾಗಿ ಪರಿಚಯಿಸಿದರು.

ಕಾರ್ಯಕ್ರಮವನ್ನು ಕಾಲೇಜಿನ ಕನ್ನಡ ಪ್ರಾಧ್ಯಾಪಕರಾದ ಧೀರಜ್ ಬೆಳ್ಳಾರೆ ನಿರೂಪಿಸಿದರು.