ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಟಪಾಡಿ : ಸಮಾನ ಮನಸ್ಕರ ತಂಡದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Posted On: 29-06-2023 06:57PM

ಕಟಪಾಡಿ : ಶಶಿಧರ ಪುರೋಹಿತ ಕಟಪಾಡಿ ಇವರ ನೇತೃತ್ವದಲ್ಲಿ ಸಮಾನ ಮನಸ್ಕರ ತಂಡದ ವತಿಯಿಂದ ವಿದ್ಯಾರ್ಥಿಗಳಿಗೆ ಕೊಡಮಾಡಿದ ಉಚಿತ ಪುಸ್ತಕವನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ವಿತರಿಸಿದರು.

ಈ ಸಂದರ್ಭ ಶಾಸಕರು ಉಚಿತ ಪುಸ್ತಕ ವಿತರಣೆ ಮಾಡಿದ ಸಮಾನ ಮನಸ್ಕ ತಂಡಕ್ಕೆ ಮತ್ತು ಇದಕ್ಕೆ ಸಹಕರಿಸಿದ ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಶಿಧರ ಪುರೋಹಿತ, ಸದಾಶಿವ ಆಚಾರ್ಯ, ಸಹನಾ ದೇವರಾಜ ಆಚಾರ್ಯ, ಅಚ್ಚುತ ಆಚಾರ್ಯ ಕಾಪು, ನಿವೃತ್ತ ತಹಶೀಲ್ದಾರರಾದ ಕೆ. ಮುರಳಿಧರ ಆಚಾರ್ಯ, ನಿವೃತ್ತ ಯೋಧ ವಾದಿರಾಜ ಆಚಾರ್ಯ, ಕಾಪು ಕಾಳಿಕಾಂಬ ದೇವಸ್ಥಾನ ಮೊಕ್ತೇಸರರಾದ ಶೇಖರ ಆಚಾರ್ಯ, ಗಣೇಶ್ ಆಚಾರ್ಯ ಉಚ್ಚಿಲ, ಭಾಸ್ಕರ ಆಚಾರ್ಯ, ಚಂದ್ರಶೇಖರ ಆಚಾರ್ಯ, ದಿವಾಕರ ಆಚಾರ್ಯ, ಕಾರ್ತಿಕ್ ಆಚಾರ್ಯ, ಬಿ.ಎ ಆಚಾರ್ಯ ಮಣಿಪಾಲ, ರವಿ ಪುರೋಹಿತ ಉಪಸ್ಥಿತರಿದ್ದರು.