ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಪಡುಬಿದ್ರಿ : ಉಚಿತ ನೇತ್ರ ತಪಾಸಣೆ, ದಂತ ಚಿಕಿತ್ಸೆ, ವ್ಯೆದ್ಯಕೀಯ ತಪಾಸಣಾ ‌ಶಿಬಿರ

Posted On: 29-06-2023 07:47PM

ಪಡುಬಿದ್ರಿ : ಇಲ್ಲಿನ ಆತ್ಮ ಶಕ್ತಿ ವಿವಿದ್ದೋದೇಶ ಸಹಕಾರಿ ಸಂಘದ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಪಡುಬಿದ್ರಿ ರೋಟರಿ ಕ್ಲಬ್ ಸಹಯೋಗದೊಂದಿಗೆ ಪಡುಬಿದ್ರಿ ಬೋರ್ಡ್ ಶಾಲೆಯಲ್ಲಿ  ಉಚಿತ ನೇತ್ರ ತಪಾಸಣೆ, ದಂತ ಚಿಕಿತ್ಸೆ ಮತ್ತು ಸಾಮಾನ್ಯ ವ್ಯೆದ್ಯಕೀಯ ತಪಾಸಣಾ ಶಿಬಿರ ಗುರುವಾರ ಜರಗಿತು.

ಪಡುಬಿದ್ರಿ ವ್ಯವಸಾಯಿಕ ಸಹಕಾರಿ ಸೊಸೈಟಿ ಅಧ್ಯಕ್ಷ ವೈ ಸುಧೀರ್ ಕುಮಾರ್ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಸಹಕಾರಿ ಸಂಸ್ಥೆಗಳು ಕೇವಲ  ಲಾಭದ ದೃಷ್ಟಿಯನ್ನುಹೊಂದದೆ ಜೊತೆಗೆ  ಜನರ ಆರೋಗ್ಯ ದೃಷ್ಟಿಯಿಂದ  ಉಚಿತವಾಗಿ ಸಾರ್ವಜನಿಕರಿಗೆ ವ್ಯೆದಕೀಯ ತಪಾಸಣೆ ಮತ್ತು ಚಿಕಿತ್ಸೆಯನ್ನು ಉತ್ತಮ ಗುಣಮಟ್ಟದಲ್ಲಿ ನೀಡುತ್ತಿರುವುದು  ಶ್ಲಾಘನೀಯ. ಸಾಮಾಜಿಕ ಕಳಕಳಿಯನ್ನು ಹೊಂದಿರುವ ಅತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಸ್ಥೆ ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದು ಹಾರೈಸಿದರು. ಆತ್ಮ ಶಕ್ತಿ ವಿವಿದ್ದೋದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭ ಮಾಜಿ ತಾ.ಪಂ. ಸದಸ್ಯ ನವೀನಚಂದ್ರ ಜೆ. ಶೆಟ್ಟಿ, ಪಡುಬಿದ್ರಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ವೈ. ಸುಕುಮಾರ್, ಕರ್ನಾಟಕ ಪಬ್ಲಿಕ್ ಸ್ಕೂಲ್ ಮುಖ್ಯೋಪಾಧ್ಯಾಯ ಕೃಷ್ಣಯ್ಯ , ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪಿ. ಕೃಷ್ಣ ಬಂಗೇರ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಪದ್ಮಿನಿ ತಂತ್ರಿ, ಅಮೃತಾನಂದಮಯಿ ಮಠ ಬೋಳೂರು ಇಲ್ಲಿನ ವೆೃದ್ಯಾಧಿಕಾರಿಗಳಾದ ಡಾ. ಸುಚಿತ್ರಾ ಸೊರಕೆ , ಡಾ. ದೇವದಾಸ್, ಉಡುಪಿ ಪ್ರಸಾದ್  ನೇತ್ರಾಲಯದ ವ್ಯೆದ್ಯಾಧಿಕಾರಿ ಡಾ. ಅಕ್ಷತಾ, ಮುಕ್ಕ  ಶ್ರೀನಿವಾಸ್  ಆಸ್ಪತ್ರೆಯ ವ್ಯೆದ್ಯಾಧಿಕಾರಿ ಡಾ. ಅಧ್ರಾ ಮಂಗಳೂರು ವೆನ್ ಲಾಕ್ ಆಸ್ಪತ್ರೆ ಯ ಬ್ಲಡ್ ಬ್ಯಾಂಕ್, ಲ್ಯಾಬ್ ಟೆಕ್ನಿಷನ್ ಜೋಯಾಸನ್ ಉಪಸ್ಥಿತರಿದ್ದರು.

ಸುಮಾರು 350 ಮಂದಿ ಶಿಬಿರದ ಪ್ರಯೋಜನ ಪಡೆದರು. ಪಡುಬಿದ್ರಿ ‌ಶಾಖಾ ಪ್ರಬಂಧಕರಾದ ಸ್ವಾತಿ ಸ್ವಾಗತಿಸಿದರು. ಸಂಸ್ಥೆಯ ಮಾನವ ಸಂಪನ್ಮೂಲ ಅಧಿಕಾರಿ ದೀಪಿಕಾ ಸನಿಲ್ ಕಾರ್ಯಕ್ರಮ ನಿರೂಪಿಸಿದರು. ಸಂತೋಷ್ ಪಡುಬಿದ್ರಿ ವಂದಿಸಿದರು.