ಉಡುಪಿ : ಕರ್ನಾಟಕ ಅರಣ್ಯ ಇಲಾಖೆ ಉಡುಪಿ ವಲಯ ಕುಂದಾಪುರ ವಿಭಾಗ, ಕರ್ನಾಟಕ ಗೃಹ ಮಂಡಳಿ, ಉಡುಪಿ, ತ್ರಿಷಾ ಕಾಲೇಜು, ಕಟಪಾಡಿ ಇವರ ಸಹಯೋಗದೊಂದಿಗೆ ಶುಕ್ರವಾರ ಕರ್ನಾಟಕ ಗೃಹ ಮಂಡಳಿ ವಸತಿ ನಿವೇಶನ ಕೊರಂಗ್ರಪಾಡಿಯಲ್ಲಿ ಆಯೋಜಿಸಿದ ವನಮಹೋತ್ಸವ ಕಾರ್ಯಕ್ರಮಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುಷ್ಪಾ, ಸದಸ್ಯರಾದ ಲಿವಿತಾ ದೇಸಿ, ಅಮೃತಾ ಪೂಜಾರಿ, ಕರ್ನಾಟಕ ಗೃಹ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಸಹನಾ, ಸಹಾಯಕ ಅಭಿಯಂತರರಾದ ಹರೀಶ್, ಉಡುಪಿ ವಲಯ ಅರಣ್ಯಾಧಿಕಾರಿಗಳಾದ ಸುಬ್ರಮಣ್ಯ ಆಚಾರ್ಯ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಜೀವನ್ ದಾಸ್ ಶೆಟ್ಟಿ, ಗುರುರಾಜ್ ಕೆ, ತ್ರಿಶಾ ಕಾಲೇಜಿನ ಉಪನ್ಯಾಸಕರಾದ ಚೇತನಾ ಸುನಿಲ್, ಧೀರಜ್ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.