ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಚಿತ್ರನಟ ಉಪೇಂದ್ರ ನಿವಾಸಕ್ಕೆ ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಸ್ವಾಮೀಜಿ ಭೇಟಿ

Posted On: 05-07-2023 10:30AM

ಉಡುಪಿ : ಜಿಲ್ಲೆಯ ಅಷ್ಟ ಮಠಗಳಲ್ಲಿ ಒಂದಾದ ಪಲಿಮಾರು ಮಠದ ಹಿರಿಯ ಶ್ರೀಗಳಾದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಖ್ಯಾತ ಚಿತ್ರನಟರಾದ ಉಪೇಂದ್ರ ಅವರ ಆಹ್ವಾನದ ಮೇರೆಗೆ ಅವರ ನಿವಾಸಕ್ಕೆ ತೆರಳಿದರು.

ಈ ಸಂದರ್ಭ ಉಪೇಂದ್ರ ಅವರು ಕೇಳಿದ ಆಧ್ಯಾತ್ಮದ ಪ್ರಶ್ನೆಗಳಿಗೆ ಉತ್ತರಿಸಿದ ಶ್ರೀಗಳು, ಉಪೇಂದ್ರ ಅವರನ್ನು ರಜತಪೀಠಪುರಕ್ಕೆ ಹಾಗೂ ಪಲಿಮಾರಿನ ಮೂಲ ಮಠಕ್ಕೆ ಭೇಟಿ ನೀಡುವಂತೆ ಆಹ್ವಾನವಿತ್ತರು.

ಈ ಸಂದರ್ಭದಲ್ಲಿ ಪಲಿಮಾರು ಮಠದ ಪಿ.ಆರ್.ಓ ಕಡೆಕಾರು ಶ್ರೀಶ ಭಟ್, ಗಿರೀಶ್ ಉಪಾಧ್ಯಾಯ, ಶ್ರೀನಿವಾಸ ಭಟ್ ಮತ್ತಿತರು ಉಪಸ್ಥಿತರಿದ್ದರು.