ಕಟಪಾಡಿ : ತ್ರಿಶಾ ಸಂಸ್ಥೆ - ಗುರು ಪೌರ್ಣಮಿ ಆಚರಣೆ
Posted On:
05-07-2023 03:10PM
ಕಟಪಾಡಿ : ವಿದ್ಯಾರ್ಥಿಯ ಸರ್ವಾಂಗೀಣ ಬೆಳವಣಿಗೆಯಲ್ಲಿ ಗುರುವಿನ ಪಾತ್ರ ಮಹತ್ವವಾದದ್ದು, ಮತ್ತು ಸರಿಯಾದ ಗುರುವಿನ ಮಾರ್ಗದರ್ಶನದಿಂದ ಮಾತ್ರ ವಿದ್ಯಾರ್ಥಿಯ ಬದುಕು ಯಶಸ್ಸಿನತ್ತ ಮುಖ ಮಾಡಲು ಸಾಧ್ಯ ಎಂದು ತ್ರಿಶಾ ಸಂಸ್ಥೆಯ ಅಧ್ಯಕ್ಷರಾದ ಸಿ.ಎ ಗೋಪಾಲಕೃಷ್ಣ ಭಟ್ ಹೇಳಿದರು. ಅವರು ತ್ರಿಶಾ ಸಂಸ್ಥೆಯಲ್ಲಿ ನಡೆದ ಗುರು ಪೂರ್ಣಿಮೆ ಆಚರಣೆಯಲ್ಲಿ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಗುರುಗಳ ಮಹತ್ವದ ಬಗ್ಗೆ ಮಾತನಾಡಿದರು. ಕಾಲೇಜಿನ ಪ್ರಾಧ್ಯಾಪಕರುಗಳ ಮೇಲೆ ವಿದ್ಯಾರ್ಥಿಗಳು ಪುಷ್ಪವೃಷ್ಟಿ ಮಾಡಿ, ಸಿಬ್ಬಂದಿಗಳಿಗೆ ಉಡುಗೊರೆ ನೀಡುವ ಮೂಲಕ ಆಚರಿಸಿದರು.
ತ್ರಿಶಾ ವಿದ್ಯಾ ಪಿ.ಯು ಕಾಲೇಜಿನ ವಿದ್ಯಾರ್ಥಿಗಳು ಪ್ರಾಧ್ಯಾಪಕರ ಕಾಲು ತೊಳೆದು, ಅವರಿಗೆ ಉಡುಗೊರೆಯನ್ನು ಕೊಡುವುದರ ಮೂಲಕ ಸಂಭ್ರಮದಿಂದ ಆಚರಿಸಿದರು.
ಕಾರ್ಯಕ್ರಮದಲ್ಲಿ ತ್ರಿಶಾ ವಿದ್ಯಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಗುರುಪ್ರಸಾದ್ ರಾವ್, ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಇಂದುರೀತಿ, ತ್ರಿಶಾ ವಿದ್ಯಾ ಪಿ.ಯು. ಕಾಲೇಜಿನ ಪ್ರಾಂಶುಪಾಲರಾದ ಡಾ. ಅನಂತ್ ಪೈ ಹಾಗೂ ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.