ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಆದ್ರಾ೯ ಮಳೆ ಆರ್ಭಟ ; ವಿವಿದೆಡೆ ಜಲಾವೃತ

Posted On: 05-07-2023 08:41PM

ಕಾಪು : ತಾಲೂಕಿನ ವಿವಿದೆಡೆ ಇಂದು ಸುರಿದ ಭಾರೀ ಮಳೆಗೆ ಹಲವು ಪ್ರದೇಶ ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ.

ತಾಲೂಕಿನ ತೆಂಕಗ್ರಾಮದ ಗುಣವತಿ ಎಂಬವರ ವಾಸ್ತವ್ಯದ ಪಕ್ಕ ಮನೆಗೆ ಮರ ಬಿದ್ದು ಅಂದಾಜು 20,000 ನಷ್ಟ ಸಂಭವಿಸಿರುತ್ತದೆ. ಕಾಪು ಕೈಪುಂಜಾಲಿನ ಬಟತೋಟದ ಪ್ರದೇಶ, ಪಡುಬಿದ್ರಿಯ ಕೆಳಗಿನ ಪೇಟೆಯ ಯೂನಿಯನ್ ಬ್ಯಾಂಕ್ ಬಳಿ ತೋಡು - ರೋಡು ಒಂದಾಗಿ ಜನರು ನಡೆದಾಡಲು ಹರಸಾಹಸ ಪಟ್ಟರು. ಉಳಿದಂತೆ ಹಲವೆಡೆ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೆ ಕೃತಕ ನೆರೆಯಿಂದ ಜಲಾವೃತವಾಗಿದೆ.