ಪಡುಬಿದ್ರಿ : ಪೇಟೆಯ ಕಾರ್ಕಳ ಜಂಕ್ಷನ್ ಬಳಿ ಅಂಬ್ಯುಲೆನ್ಸ್ ವಾಹನವೊಂದು ರಾಜು ಪೂಜಾರಿ ಎಂಬುವವರಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಜುಲೈ 4ರಂದು ನಡೆದಿದೆ.
ತೆಂಕ ಎರ್ಮಾಳು ಗ್ರಾಮದ ನಿವಾಸಿಯಾದ ರಾಜು ಪೂಜಾರಿ ತೆಂಗಿನ ಮರದಿಂದ ಶೇಂದಿ ತೆಗೆಯುವ ಕೆಲಸ ಮಾಡಿಕೊಂಡಿದ್ದು, ಅವರು ಎಂದಿನಂತೆ ಶೇಂದಿಯನ್ನು ಪಡುಬಿದ್ರಿಯ ಮಾರ್ಕೆಟ್ ರಸ್ತೆಯಲ್ಲಿರುವ ಶೇಂದಿ ಅಂಗಡಿಗೆ ಮಾರಾಟ ಮಾಡಿ ವಾಪಾಸ್ಸು ಪಡುಬಿದ್ರಿ ಪೇಟೆಯಲ್ಲಿರುವ ಅಂಗಡಿಗೆ ಹೋಗಲು ಕಾರ್ಕಳ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ದಾಟಿ ಪೂರ್ವ ಅಂಚಿನ ಬಳಿ ತಲುಪಿದಾಗ ಅಂಬ್ಯುಲೆನ್ಸ್ ವಾಹನದ ಚಾಲಕ ಶಫೀಕ್ ಕೆರೂರಿ ಎಂಬಾತನು ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಅತೀವೇಗ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು ಡಿಕ್ಕಿಹೊಡೆದ ಪರಿಣಾಮ ರಾಜು ಪೂಜಾರಿರವರು ರಸ್ತೆಗೆ ಬಿದ್ದಿದ್ದು ಅವರ ತಲೆಗೆ, ಕಣ್ಣಿನ ಬದಿ, ಕೈಗೆ ಪೆಟ್ಟಾಗಿದ್ದು, ಮೂಗಿನಲ್ಲಿ ರಕ್ತ ಬಂದಿರುತ್ತದೆ. ನಂತರ ಗಾಯಾಳುವಿಗೆ ಪಡುಬಿದ್ರಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಒಳರೋಗಿಯಾಗಿ ದಾಖಲಿಸಲಾಗಿದೆ.
ಈ ಬಗ್ಗೆ ಪಡುಬಿದ್ರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.