ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನದ "ಅಮ್ಮನ ಆಲಯ ನಿರ್ಮಾಣದ" ಬಗ್ಗೆ ದೇವಳದ ಸಮಿತಿಯ ಪ್ರಮುಖರು ಜುಲೈ 5 ರಂದು ಬೆಳ್ಳೆ ಗ್ರಾಮದ ಪ್ರಮುಖರನ್ನು ಭೇಟಿಯಾಗಿ ಬೆಳ್ಳೆ ಗ್ರಾಮದಲ್ಲಿ ಸಭೆಯನ್ನು ಮಾಡಿ ಗ್ರಾಮ ಸಮಿತಿಯನ್ನು ರಚಿಸುವ ಬಗ್ಗೆ ಕಾರ್ಯಪ್ರವೃತರಾಗುವಂತೆ ತಿಳಿಸಿ ಜೀರ್ಣೋದ್ಧಾರದ ಮನವಿಯನ್ನು ನೀಡಲಾಯಿತು.
ಗ್ರಾಮದ ಪ್ರತಿ ಮನೆಯಿಂದಲೂ ಕನಿಷ್ಠ ಒಬ್ಬರಾದರೂ ಒಂಬತ್ತು ಶಿಲೆ ಅಥವಾ ಅದಕ್ಕಿಂತ ಹೆಚ್ಚಿನ ಶಿಲಾಸೇವೆಯನ್ನು ನೀಡುವ ಮೂಲಕ "ಕಾಪುವಿನ ಅಮ್ಮನ ಮಕ್ಕಳು" ತಂಡಕ್ಕೆ ಸೇರಬೇಕೆಂದು ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಸಮಿತಿಯ ಉಪಾಧ್ಯಕ್ಷರಾದ ಮಾಧವ ಆರ್. ಪಾಲನ್, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕರಾದ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ಗ್ರಾಮ ಸಮಿತಿಯ ಮುಖ್ಯ ಸಂಚಾಲಕರಾದ ಅರುಣ್ ಶೆಟ್ಟಿ ಪಾದೂರು, ಕಾಪು ಪುರಸಭಾ ವ್ಯಾಪ್ತಿಯ ವಾರ್ಡ್ ಸಮಿತಿಯ ಪ್ರಧಾನ ಸಂಚಾಲಕರಾದ ಶ್ರೀಕರ್ ಶೆಟ್ಟಿ ಕಲ್ಯಾ, ಬೆಳ್ಳೆ ಗ್ರಾಮದ ಪ್ರಮುಖರಾದ ಬೆಳ್ಳೆ ಶಿವಾಜಿ ಸುವರ್ಣ, ಹರೀಶ್ ಶೆಟ್ಟಿ ಕಕ್ರಮನೆ, ರಂಜಿನಿ ಹೆಗ್ಡೆ ಮತ್ತು ಸುಜಾತ ಸುವರ್ಣ ಉಪಸ್ಥಿತರಿದ್ದರು.