ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಪಡುಬಿದ್ರಿ : ಕಡಲ್ಕೊರೆತ ; ಕೈರಂಪಣಿ ಗೋದಾಮು ಸಮುದ್ರ ಪಾಲು

Posted On: 07-07-2023 07:31PM

ಪಡುಬಿದ್ರಿ : ಮಳೆ ಅಬ್ಬರ ಕೊಂಚ ಕಡಿಮೆಯಾದರೂ ಕಡಲಾರ್ಭಟ ಇನ್ನೂ ನಿಂತಿಲ್ಲ. ಪಡುಬಿದ್ರಿಯ ಕಾಡಿಪಟ್ಣ ಮುಖ್ಯ ಬೀಚ್ ನಲ್ಲಿರುವ ಇಂಟರ್ಲಾಕ್ ಮತ್ತು ತೆಂಗಿನ ಮರಗಳು ಕಡಲ್ಕೊರೆತದ ಹಾವಳಿಗೆ ಸಿಲುಕಿವೆ.

ಇನ್ನೊಂದೆಡೆ ಕೈ ರಂಪಣಿ ಗೋದಾಮು ಕಡಲಲೆಗಳಿಗೆ ಸಿಲುಕಿ ನೆಲಸಮವಾಗಿದೆ. ಇನ್ನೂ ಮುಂದುವರಿದಂತೆ ಮೀನುಗಾರಿಕಾ ರಸ್ತೆಯು ಅಪಾಯದ ಅಂಚಿನಲ್ಲಿದೆ.