ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ದೇಸಿಕ್ರ್ಯೂ ಸೊಲ್ಯೂಷನ್ಸ್ ಸರ್ವಿಸ್ ಪ್ರೈ.ಲಿಮಿಟೆಡ್ - ವನಮಹೋತ್ಸವ

Posted On: 07-07-2023 07:47PM

ಕಾಪು : ದೇಸಿಕ್ರ್ಯೂ ಸೊಲ್ಯೂಷನ್ಸ್ ಸರ್ವಿಸ್ ಪ್ರೈ.ಲಿಮಿಟೆಡ್ ಇವರ ಆಶ್ರಯದಲ್ಲಿ ‌ಕಾಪುವಿನಲ್ಲಿ‌ ವನಮಹೋತ್ಸವ ಆಚರಿಸಲಾಯಿತು.

ಅರಣ್ಯಾಧಿಕಾರಿ ಜೀವನ್ ದಾಸ್ ಶೆಟ್ಟಿ ಮತ್ತು ಮಂಜುನಾಥ್ ಅತಿಥಿಗಳಾಗಿ‌ ಭಾಗವಹಿಸಿದ್ದರು. ಜೀವನ್ ದಾಸ್ ಶೆಟ್ಟಿ ಮರಗಳ ಪ್ರಾಮುಖ್ಯತೆ ಕುರಿತು ಮಾತನಾಡಿದರು.

ಸಂಸ್ಥೆಯ ವಿನೋದ್ ರಾವ್ ವನಮಹೋತ್ಸವದ ಕುರಿತು ಮಾತನಾಡಿದರು. ಈ‌ ಸಂದರ್ಭ ಸಂಸ್ಥೆಯ ‌ಉದ್ಯೋಗಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ಬಳಿಕ ಸಂಸ್ಥೆಯ ಉದ್ಯೋಗಿಗಳಿಗೆ ಹೂವಿನ ಮತ್ತು ಹಣ್ಣಿನ ‌ಗಿಡಗಳನ್ನು ವಿತರಿಸಲಾಯಿತು. ಕಾರ್ಯಕ್ರಮ ಆಯೋಜಕರಾದ ಸಂಸ್ಥೆಯ ರಶ್ಮಿ‌ ಎಸ್ ಎಮ್ ಸ್ವಾಗತಿಸಿದರು. ವೀಣಾ ಶೆಟ್ಟಿ ವಂದಿಸಿದರು.