ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಕಳತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವನಮಹೋತ್ಸವ

Posted On: 15-07-2023 02:47PM

ಕಾಪು : ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಳತ್ತೂರು, ಅರಣ್ಯ ಇಲಾಖೆ, ಕಳತ್ತೂರು ಗ್ರಾಮ ಪಂಚಾಯತ್, ಧರಣಿ ಸಮಾಜ ಸೇವಾ ಸಂಘ, ಕಾಪು ಇವರ ಜಂಟಿ ಸಹಯೋಗದೊಂದಿಗೆ ಶನಿವಾರ ಕಳತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮ ಜರಗಿತು.

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕಳತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲತಾ ಆಚಾರ್ಯ, ಕಾಪು ಧರಣಿ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಲೀಲಾಧರ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಅನಿತಾ ಬಿ, ಉಡುಪಿ ವಲಯ ಅರಣ್ಯಾಧಿಕಾರಿಗಳಾದ ಸುಬ್ರಮಣ್ಯ ಆಚಾರ್ಯ, ಉಪ ವಲಯ ಅರಣ್ಯಾಧಿಕಾರಿಗಳಾದ ಜೀವನ್ ದಾಸ್ ಶೆಟ್ಟಿ, ಪ್ರಾಂಶುಪಾಲರಾದ ಉಮಕಾಂತ್ ಗೌಡ ಹಾಗೂ ಪ್ರಮುಖರು ಉಪಸ್ಥಿತರಿದ್ದರು.