ಉಡುಪಿ : ಇಲ್ಲಿನ ವುಡ್ಲ್ಯಾಂಡ್ಸ್ ಹೋಟೆಲ್ ಹತ್ತಿರದ ಬೊಬ್ಬರ್ಯಕಟ್ಟೆ ಶ್ರೀ ಬೊಬ್ಬರ್ಯ, ಕಾಂತೇರಿ ಜುಮಾದಿ ಹಾಗೂ ಕಲ್ಕುಡ, ಕೊರಗಜ್ಜ ಪರಿವಾರ ದೈವಗಳ ದೈವಸ್ಥಾನದಲ್ಲಿ ಬೊಬ್ಬರ್ಯ ಯುವ ಸೇವಾ ಸಮಿತಿ ಉಡುಪಿ ಸುಪ್ರಸಾದ್ ಶೆಟ್ಟಿ ಅಭಿಮಾನಿ ಬಳಗ ಉಡುಪಿ ಹಾಗೂ ಮಮತಾ ಪಿ. ಶೆಟ್ಟಿ ಅಭಿಮಾನಿ ಬಳಗ ಉಡುಪಿ ಇವರ ವತಿಯಿಂದ ದೊಂದಿ ಬೆಳಕಿನ ಕೊರಗಜ್ಜ ದೈವದ ನೇಮೋತ್ಸವ ಜುಲೈ 22, ಶನಿವಾರ ಸಂಜೆ 7 ಗಂಟೆಗೆ ಜರಗಲಿದೆ.
ನೇಮೋತ್ಸವದ ನೇರ ಪ್ರಸಾರವವು ನಮ್ಮ ಉಡುಪಿ ಟಿ.ವಿ. ಚಾನೆಲ್ ಹಾಗೂ ಫೇಸ್ಬುಕ್ ಪೇಜ್ನಲ್ಲಿ ಪ್ರಸಾರವಾಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.