ಕಾಪು : ತಾಲೂಕಿನಲ್ಲಿ ಗಾಳಿ ಮಳೆಗೆ ಅಪಾರ ಹಾನಿ
Posted On:
26-07-2023 01:55PM
ಕಾಪು : ತಾಲೂಕಿನಲ್ಲಿ ಭಾರಿ ಗಾಳಿ ಮತ್ತು ಮಳೆಯಿಂದಾಗಿ ಕಳೆದ ಎರಡು ದಿನಗಳಲ್ಲಿ ಹತ್ತಕ್ಕೂ ಅಧಿಕ ಮನೆಗಳಿಗೆ ಹಾನಿಯುಂಟಾಗಿದ್ದು ಲಕ್ಷಾಂತರ ರೂ. ಮೊತ್ತದ ಸೊತ್ತು ನಷ್ಟವುಂಟಾಗಿದೆ.
ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೆರೆಯ ಭೀತಿ ಎದುರಾಗಿದೆ. ಇನ್ನಂಜೆ-ಮರ್ಕೋಡಿ ಹೊಳೆ ಬಳಿ, ಕಾಪು ಜನಾರ್ದನ ದೇವಸ್ಥಾನದ ಬಳಿ, ಮಲ್ಲಾರು-ಮೂಳೂರು- ಬೆಳಪು ಬೈಲ್, ಉಳಿಯಾರಗೋಳಿ ಕೈಪುಂಜಾಲು ಬೈಲು ಮುಳುಗಡೆಯಾಗಿದೆ.
ಇದೀಗ ಮತ್ತೆ ಭಾರಿ ಮಳೆ ಸುರಿದ ಪರಿಣಾಮ ಭತ್ತದ ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿದ್ದು ನೂರಾರು ಹೆಕ್ಟೇರ್ ಕೃಷಿ ಗದ್ದೆಗಳಲ್ಲಿ ನಡೆಸಲಾಗಿರುವ ಭತ್ತದ ನಾಟಿ ಕೊಳೆಯುವ ಭೀತಿ ಎದುರಾಗಿದೆ. ಮಳೆ ಹಾನಿ ಮತ್ತು ನೆರೆ ಪೀಡಿತ ಪ್ರದೇಶಗಳಿಗೆ ಕಾಪು ಶಾಸಕರು, ತಾಲೂಕು ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು ಭೇಟಿ ನೀಡಿ ಹಾನಿ ಪರಿಶೀಲನೆ ನಡೆಸಿದ್ದಾರೆ.