ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ನೆರೆ ಸಂತ್ರಸ್ತರಿಗೆ ಗರಿಷ್ಟ ಪರಿಹಾರ ನೀಡುವಂತೆ ಮುಖ್ಯಮಂತ್ರಿ, ಕಂದಾಯ ಸಚಿವರಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ

Posted On: 26-07-2023 06:53PM

ಕಾಪು : ವಿಧಾನಸಭಾ ಕ್ಷೇತ್ರದ ಬಹುಭಾಗವು ಕಡಲ ಪ್ರದೇಶಗಳಿಗೆ ಹೊಂದಿಕೊಂಡಿರುವ ಭಾಗದಲ್ಲಿ ಜನರು ವಾಸ್ತವ್ಯ ಮಾಡಿಕೊಂಡಿರುತ್ತಾರೆ. ಜೂನ್ ತಿಂಗಳಿನಿಂದ ಚಂಡಮಾರುತ ಹಾಗೂ ತೀವ್ರ ಸುರಿದ ಮಳೆಯಿಂದಾಗಿ ಅತಿವೃಷ್ಟಿ ಉಂಟಾಗಿದ್ದು, ಜನರ ಆಸ್ತಿ-ಪಾಸ್ತಿಗಳು ನಷ್ಟ ಉಂಟಾಗಿರುತ್ತದೆ. ಪ್ರವಾಹದಿಂದ ನೀರು ನುಗ್ಗಿರುವ ಮನೆಗಳ ಗೃಹಪಯೋಗಿ ವಸ್ತುಗಳು, ಬಟ್ಟೆ ಬರೆಗಳಿಗೆ ಹಾನಿ ಉಂಟಾಗಿರುತ್ತದೆ. ಅಲ್ಲದೇ ತೀವ್ರ ತರಹದ ಮಳೆಯಿಂದ ವಾಸ್ತವ್ಯದ ಮನೆ ಭಾಗಶಃ ಹಾಗು ಪೂರ್ಣ ಹಾನಿಯಾಗಿದ್ದು, ಪರಿಹಾರ ನೀಡುವುದು ತೀರಾ ಅತ್ಯವಶ್ಯಕತೆ ಇರುತ್ತದೆ.

ಅತಿವೃಷ್ಟಿ ಹಾಗೂ ಪ್ರವಾಹದಿಂದ ಹಾನಿಗೀಡಾದ ಮನೆಗಳ ಪುನರ್ ನಿರ್ಮಾಣಕ್ಕೆ ಎ ಕೆಟಗರಿ ಅಡಿ 5 ಲಕ್ಷ ರೂಪಾಯಿ ಪರಿಹಾರ ಹಾಗೂ ಮನೆಗಳ ಭಾಗಶಃ ರಿಪೇರಿಗೆ ಬಿ ಕೆಟಗರಿ ಅಡಿ 3 ಲಕ್ಷ ಮತ್ತು ಗೃಹಪಯೋಗಿ ವಸ್ತುಗಳ ಹಾನಿಗೆ ಸಿ ಕೆಟಗರಿ ಅಡಿ 50 ಸಾವಿರ ರೂಪಾಯಿ ಅನುದಾನ ಸಂತ್ರಸ್ತರಿಗೆ ದೊರಕುತ್ತಿತ್ತು. ಆದ್ದರಿಂದ ಈ ಹಿಂದಿನಂತೆಯೇ ಸಂತ್ರಸ್ತರಿಗೆ ಗರಿಷ್ಠ ಪರಿಹಾರ ಧನ ಮಂಜೂರು ಮಾಡುವಂತೆ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದರು.