ಕಾಪು : ಕ್ಷೇತ್ರದ ಶಾಸಕಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಜುಲೈ27ರಂದು 80 ಬಡಗುಬೆಟ್ಟು ಗ್ರಾಮ ಪಂಚಾಯತ್ ಗೆ ಭೇಟಿ ನೀಡಿದರು.
ಶಾಸಕರು ಪಂಚಾಯತ್ ನ ಶೇ.25 ನಿಧಿಯಿಂದ ಮಂಜೂರಾದ ಮನೆ ರಿಪೇರಿಯ ಸಹಾಯಧನ ಹಾಗೂ ವೈದ್ಯಕೀಯ ಸಹಾಯಧನ ವಿತರಿಸಿ ಶೇ. 5 ನಿಧಿಯಿಂದ ಮಂಜೂರಾದ ವೈದ್ಯಕೀಯ ಸಹಾಯಧನ ವಿತರಣೆ ಮಾಡಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.
ಈ ಸಂದರ್ಭ 80 ಬಡಗಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಶಾಸಕರನ್ನು ಅಭಿನಂದಿಸಲಾಯಿತು.
ಈ ಸಂದರ್ಭ 80 ಬಡಗಬೆಟ್ಟು ಅಧ್ಯಕ್ಷರಾದ ಮಾಧವಿ ಆಚಾರ್ಯ, ಉಪಾಧ್ಯಕ್ಷರಾದ ನಿರೂಪಮಾ ಹೆಗ್ಡೆ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಗ್ರಾಮ ಪಂಚಾಯತ್ ಸದಸ್ಯರಾದ ಉಪೇಂದ್ರ ನಾಯಕ್, 80 ಬಡಗಬೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಗ್ರಾಮ ಪಂಚಾಯತ್ ಸದಸ್ಯರಾದ ಶಾಂತಾರಾಮ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಅಭಿಯಂತರ ಸುಭಾಸ್ ರೆಡ್ಡಿ, 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಶೋಕ್, ಗ್ರಾಮ ಆಡಳಿತಾಧಿಕಾರಿ ಗುರುರಾಜ್ ಹಾಗೂ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.