ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಜಿಲ್ಲಾ ರಂಗಮಂಟಪ ಮೈದಾನ ದುಸ್ಥಿತಿ ವರದಿಗೆ ಸ್ಪಂದಿಸಿದ ನಗರಾಭಿವೃದ್ಧಿ ಪ್ರಾಧಿಕಾರ

Posted On: 21-07-2020 10:36PM

ಉಡುಪಿ ಬೀಡಿನಗುಡ್ಡೆ ಜಿಲ್ಲಾ ರಂಗ ಮಂದಿರ ರ ಆವರಣ ಗೋಡೆ ಕುಸಿದು 3 ತಿಂಗಳಾದರೂ ಇನ್ನೂ ದುರಸ್ತಿಯಾಗದ ಕಾರಣ ರಂಗಮಂದಿರ ಆವರಣದಲ್ಲಿ ಕುಡುಕರು, ಅಲೆಮಾರಿಗಳು ತನ್ನ ಆಶ್ರಯತಾಣವಾಗಿ ಮಾಡಿದ್ದರು ಈ ಬಗ್ಗೆ ವರದಿ ಗೆ ಸ್ಪಂದಿಸಿದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ರಾಘವೇಂದ್ರ ಕಿಣಿ ಇಂದು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.ಈಗಾಗಲೇ ಈ ಕಟ್ಟಡವನ್ನು ನಗರಸಭೆಗೆ ಹಸ್ತಾoತರಿಸಲಾಗಿದೆ.ಈ ಕೂಡಲೇ ಈ ಬಗ್ಗೆ ಕಾಮಗಾರಿ ನಡೆಸುವಂತೆ ನಗರಸಭಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಈ ರೀತಿಯ ತುತು೯ ಸ್ಪಂದನೆಗೆ ಸಾವ೯ಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ರಾಘವೇಂದ್ರ ಪ್ರಭು, ಕವಾ೯ಲು ಯುವ ಲೇಖಕ