ತುಲುನಾಡ ದೈವಾರದೆಕೆರ್ನ ಸಹಕಾರಿ ಒಕ್ಕೂಟ ಉಡುಪಿ ಜಿಲ್ಲೆ ಹಾಗೂ ಕಾಪು ಘಟಕ ವತಿಯಿಂದ ಕಾಪು ವಲಯ ಶಾಸಕರಾದ ಲಾಲಾಜಿ ಮೆಂಡನ್ ಅವರಿಗೆ ಉಡುಪಿ ಜಿಲ್ಲಾ ಸಮಸ್ತ ದೈವ ಚಾಕ್ರಿ ವರ್ಗದವರ ಮನವಿಯನ್ನು ಕೊಡಲಾಯಿತು, ಈ ಮನವಿಯಲ್ಲಿ ದೈವ ಚಾಕ್ರಿ ವರ್ಗದವರಿಗೆ ಸಿಕ್ಕಬೇಕಾದ ಸರ್ಕಾರದಿಂದ ಸವಲತ್ತು ಹಾಗೂ ಕೋರನದ ತುರ್ತು ಸಂದರ್ಭದಲ್ಲಿ ತಕ್ಕಮಟ್ಟಿಗೆ 150 ಜನರ ಒಳಗೆ ದೈವಸ್ಥಾನದ ಧಾರ್ಮಿಕ ಕಾರ್ಯಕ್ರಮ ನೇಮೋತ್ಸವ ಮಾರಿಪೂಜೆ ದರ್ಶನ ಸೇವೆ ಇತರ ಸೇವೆಗಳಿಗೆ ಸರ್ಕಾರದಿಂದ ಅನುಮತಿ ಕೊಡಬೇಕಾಗಿ ಮನವಿ ಸಲ್ಲಿಸಿರುತ್ತಾರೆ. ನಂತರ ಶಾಸಕರು ಮನವಿಯನ್ನು ತೆಗೆದುಕೊಂಡು ನಿಮ್ಮ ಸಮಸ್ಯೆಗೆ ನಾನು ಡಿಸಿ ಅವರಿಗೆ ಹಾಗೂ ಮಾನ್ಯ ಮುಖ್ಯಮಂತ್ರಿಯವರಿಗೆ ಇದರ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ಎಲ್ಲಾ ಸದಸ್ಯರಿಗೆ ಧೈರ್ಯ ತುಂಬಿದರು. ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಜಿಲ್ಲಾಧ್ಯಕ್ಷರಾದ ರಾಘವ ಸೇರಿಗಾರ್ ಹಾಗೂ ಪ್ರಧಾನ ಕಾರ್ಯದರ್ಶಿಯಾದ ವಿನೋದ್ ಶೆಟ್ಟಿ ಕೋಶಾಧಿಕಾರಿ ಶ್ರೀಧರ್ ಪೂಜಾರಿ ಕ್ರೀಡಾ ಕಾರ್ಯದರ್ಶಿ ದಯೆಶಾ ಕೋಟ್ಯಾನ್ ಕಾಪು ಘಟಕದ ಅಧ್ಯಕ್ಷರಾದ ಯಶೋಧರ್ ಶೆಟ್ಟಿ ಉಪಾಧ್ಯಕ್ಷರಾದ ಮಾಧವ ಪಂಬದ ಸತೀಶ್ ಪೂಜಾರಿ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.