ಬಂಟಕಲ್ಲು : ನಾಗರಿಕ ಸೇವಾ ಸಮಿತಿಯಿಂದ ಶಾಸಕರ ಭೇಟಿ ; ಅಭಿನಂದನೆ ; ಮನವಿ ಸಲ್ಲಿಕೆ
Posted On:
02-08-2023 06:26PM
ಬಂಟಕಲ್ಲು : ನಾಗರಿಕ ಸೇವಾ ಸಮಿತಿ (ರಿ.) ಬಂಟಕಲ್ಲು ಇವರು ಕಾಪು ಕ್ಷೇತ್ರ ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆಯವರನ್ನು ಅವರ ಕಛೇರಿಯಲ್ಲಿ ಭೇಟಿಯಾಗಿ ಸಮಿತಿ ಪರವಾಗಿ ಶಾಸಕರನ್ನು ಸನ್ಮಾನಿಸಿ, ಅಭಿನಂದಿಸಿ ಮನವಿ ಸಲ್ಲಿಸಿದರು.
ನಾ.ಸೇ.ಸಮಿತಿ ಅಧ್ಯಕ್ಷ ಕೆ .ಆರ್ ಪಾಟ್ಕರ್ ಶಾಸಕರನ್ನು ಸನ್ಮಾನಿಸಿ, ಅಭಿನಂದಿಸಿದರು. ಶಾಸಕರಿಗೆ ಮನವಿ ಸಲ್ಲಿಸಿ ಸಮಿತಿಯು ಕೆಲವು ಪ್ರಮುಖ ಅಭಿವೃದ್ದಿ ವಿಚಾರಗಳ ಬಗ್ಗೆ ಶಾಸಕರಲ್ಲಿ ಚರ್ಚಿಸಿತು. ಶಿರ್ವ ಸಮುದಾಯ ಆರೋಗ್ಯ ಕೇಂದ್ರವನ್ನು 24 ಗಂಟೆ ಕಾರ್ಯನಿರ್ವಹಿಸುವಂತೆ, ಕೇಂದ್ರದಲ್ಲಿ ಡಯಾಲಿಸ್ ಯಂತ್ರದ ಅಳವಡಿಕೆ, ತಜ್ಞ ವೈದ್ಯರ ಹಾಗೂ ಇತರೇ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವುದು, ತೀರ ಹದೆಗಟ್ಟಿರುವ ಕಟಪಾಡಿ- ಶಿರ್ವ ರಾಜ್ಯ ಹೆದ್ದಾರಿಯನ್ನು ಮರು ಡಾಮರೀಕರಣಗೊಳಿಸುವುದು, ದ್ವಿಪಥ ಕಾಮಗಾರಿ ಬಾಕಿ ಇರುವ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಲ್ಕೆಯಿಂದ ಸಿದ್ದಿವಿನಾಯಕ ದೇವಸ್ಥಾನದವರೆಗಿನ ರಾಜ್ಯ ಹೆದ್ದಾರಿಯನ್ನು ದ್ವಿಪಥಗೊಳಿಸಿ ಅಭಿವೃದ್ದಿಪಡಿಸುವುದು, ಶಿರ್ವ ಉಡುಪಿ ಮಾರ್ಗದಲ್ಲಿ ಒಂದು ನರ್ಮ್ ಬಸ್ ಸಂಚರಿಸುತ್ತಿದ್ದು, ಪರವಾನಿಗೆ ಇದ್ದೂ ಸಂಚಾರವನ್ನು ನಿಲ್ಲಿಸಿರುವ ಇನ್ನೂಂದು ನರ್ಮ್ ಬಸ್ಸು ಸಂಚಾರವನ್ನು ಪುನರಾರಂಭಿಸುವುದು, ಶಿರ್ವ ಮೆಸ್ಕಾಂ ಉಪವಿಭಾಗದಲ್ಲಿ ಲೈನ್ ಮೆನ್ ಗಳ ಕೊರತೆ, ಶಿರ್ವ ಕೇಂದ್ರಿಕೃತವಾಗಿ ಅಗ್ನಿಶಾಮಕ ಘಟಕವನ್ನು ಪ್ರಾರಂಭಿಸುವಂತೆ ಸಮಿತಿಯಿಂದ ಮನವಿಯನ್ನು ನೀಡಲಾಯಿತು.
ಶಾಸಕರು ಮನವಿ ಬಗ್ಗೆ ಅಧಿಕಾರಿಗಳೊಂದಿಗೆ ಕರೆಮಾಡಿ ಮಾತನಾಡಿ ಈ ವಿಚಾರಗಳ ಬಗ್ಗೆ ಕ್ರಮ ವಹಿಸುವಂತೆ ತಿಳಿಸಿದರು. ಸಮಿತಿ ಮನವಿ ವಿಚಾರಗಳಿಗೆ ಸೂಕ್ತವಾಗಿ ಸ್ಪಂದಿಸುವುದಾಗಿ ತಿಳಿಸಿದರು.
ನಾ.ಸೇ ಸಮಿತಿಯ ಉಪಾಧ್ಯಕ್ಷರಾದ ಪುಂಡಲೀಕ ಮರಾಠೆ, ಮಾಧವ ಕಾಮತ್, ಕಾರ್ಯದರ್ಶಿ ದಿನೇಶ್ ದೇವಾಡಿಗ, ಕೋಶಾಧಿಕಾರಿ ಜಗದೀಶ್ ಆಚಾರ್ಯ, ಸಮಿತಿ ಸದಸ್ಯರಾದ ಉಮೇಶ್ ರಾವ್, ವಿರೇಂದ್ರ ಪಾಟ್ಕರ್, ಡೇನಿಸ್ ಡಿ ಸೋಜ, ಹರೀಶ್ ಹೇರೂರು, ವಸಂತಿ ಆಚಾರ್ಯ, ರಾಘವೇಂದ್ರ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.